ಎರಡನೇ ದಿನವೂ ಮುಂದುವರಿದ ಮುನಿಯಾಲ್ ಬೆಂಬಲಿಗರ ಪ್ರತಿಭಟನೆ, ಬೆಂಬಲಿಗರನ್ನು ಸಮಾಧಾನ ಪಡಿಸಲು ಉದಯ್ ಶೆಟ್ಟಿ ಹರಸಾಹಸ
Udupi – ಕಾರ್ಕಳ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮುನಿಯಾಲು ಉದಯ ಕುಮಾರ್ ಶೆಟ್ಟಿಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಬೆಂಬಲಿಗರಿಂದ ಎರಡನೇ ದಿನವೂ ಮುಂದುವರೆಯಿತು. ನಿನ್ನೆ ಕಾರ್ಕಳದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಟಿಕೆಟ್ ಕೈತಪ್ಪಲು ಕಾರಣರಾದ ಮಾಜಿ ಸಚಿವ ವೀರಪ್ಪ ಮೊಯ್ಲಿ ಹಾಗೂ ಜೆಎ ಭಾವ ವಿರುದ್ದ ಆಕ್ರೋಶ ಹೊರಹಾಕಿದ ಕಾರ್ಯಕರ್ತರು ಮೊಯ್ಲಿ ಹಾಗೂ ಭಾವ ಅವರ ಅಣುಕು ಶವಯಾತ್ರೆ ನಡೆಸಿ ಪ್ರತಿಕೃತಿ ದಹನ ನಡೆಸಿದ್ರು ಆದರೆ ಇಂದು ಕೂಡ ಪ್ರತಿಭಟನೆ ಕಾವು ಮುಂದುವರೆದು, ಹೆಬ್ರಿಯ ಕಾಂಗ್ರೆಸ್ ಕಚೇರಿ ಎದುರು ಕಾರ್ಯಕರ್ತರು,ಬೆಂಬಲಿಗರು ಪ್ರತಿಭಟನೆ ಉದ್ವಿಗ್ನಗೊಂಡು ಓರ್ವ ಉದಯಕುಮಾರ್ ಅವರ ಬೆಂಬಲಿಗ ಮುರತಂಗಡಿಯ ಆಸೀಫ್ ಮೈಮೇಲೆ ಸೀಮೆಎಣ್ಣೆ ಸುರಿದು ಆತ್ಮಹತ್ಯೆಗೂ ಯತ್ನಿಸಿದ್ರು. ಈ ವೇಳೆ ಮಾಜಿ ಸಚಿವ ವೀರಪ್ಪ ಮೊಯಿಲಿ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ದಿಕ್ಕಾರ ಕೂಗಲಾಯಿತು. ಇನ್ನು ಇದೇ ಸಂಧರ್ಭದಲ್ಲಿ ಆಕ್ರೋಶ ಹೊರಹಾಕಿದ ಕಾರ್ಯಕರ್ತರು ಕಾರ್ಕಳದಲ್ಲಿ ಉದಯ ಕುಮಾರ್ ಶೆಟ್ಟಿಗೆ ಟೀಕೇಟ್ ನೀಡಬೇಕು ತಪ್ಪಿದ್ದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಕಾಂಗ್ರೆಸ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು. ಈ ವೇಳೆ ಸ್ಥಳಕ್ಕಾಗಮಿಸಿದ ಮುನಿಯಾಲು ಉದಯ ಕುಮಾರ್ ಶೆಟ್ಟಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ ಯಾರೂ ಪ್ರತಿಭಟನೆ ಮಾಡಬಾರದು, ಧೈರ್ಯದಿಂದಿರಿನನಗೆ ಭರವಸೆ ಇದೆ. ನಮ್ಮ ನಾಯಕರಾದ ವೀರಪ್ಪ ಮೊಯಿಲಿ ಮತ್ತು ಗೋಪಾಲ ಭಂಡಾರಿಯವರು ನನಗೆ ಸೀಟನ್ನು ಕೊನೆಯ ಕ್ಷಣದಲ್ಲಿ ಬಿಟ್ಟು ಕೊಡುತ್ತಾರೆ. ಕಾರ್ಕಳದಲ್ಲಿ ಕಾಂಗ್ರೆಸ್ ಶಾಸಕರನ್ನು ನಾವು ಕಾಣಬೇಕಾಗಿದೆ ಎಂದು ಕಾರ್ಯಕರ್ತರನ್ನು ಸಮಾಧಾನಪಡಿಸಿದ್ರು.

