ಎಲ್ಲ ವಲಯಗಳು ಎದುರಿಸುತ್ತಿರುವ ಸವಾಲುಗಳಿಗೆ ಸರ್ಕಾರ ಸ್ಪಂದಿಸುತ್ತದೆ : ನಿರ್ಮಲಾ ಸೀತಾರಾಮನ್ -Vishwanews24
ಕೋಲ್ಕತ್ತಾ : ಸಂಕಷ್ಟದಲ್ಲಿರುವ ಎಲ್ಲ ಉದ್ಯಮಗಳಿಗೆ ನೆರವು ನೀಡಲು ಸರ್ಕಾರ ಸಿದ್ಧವಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ವಲಯಗಳು ಎದುರಿಸುತ್ತಿರುವ ಸವಾಲುಗಳಿಗೆ ಸರ್ಕಾರ ಸ್ಪಂದಿಸುತ್ತದೆ. ಕ್ಷೇತ್ರಗಳು ಎದುರಿಸುತ್ತಿರುವ ಸವಾಲುಗಳನ್ನು ಗಮನಿಸುತ್ತಿದ್ದೇವೆ. ಆ ಎಲ್ಲ ಸವಾಲುಗಳಿಗೆ ಸ್ಪಂದಿಸಿ ಸಾಧ್ಯವಿರುವ ರೀತಿಯಲ್ಲಿ ಸಹಾಯ ಮಾಡುತ್ತೇವೆ. ಸಮಸ್ಯೆಗಳಡಿ ಸಿಲುಕಿರುವ ಕ್ಷೇತ್ರಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ ಎಂದರು.
ಇನ್ನು ಆದಾಯ ಸಂಗ್ರಹಣೆ ಕಡಿಯಾದರೆ ಕೇಂದ್ರ ಸರ್ಕಾರವು ಈ ಬಗ್ಗೆ ಪರಿಶೀಲನೆ ನಡೆಸಲಿದೆ. ಅದರೆ, ಸಾಮಾಜಿಕ ವಲಯಗಳ ಖರ್ಚಿನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಆರ್ ಬಿಐ ನಿಂದ ಸರ್ಕಾರಕ್ಕೆ ಬಂದ ಹೆಚ್ಚುವರಿ ನಿಧಿ ಹೇಗೆ ಬಳಸುವುದು ಎಂಬುದರ ಕುರಿತು ಕೇಂದ್ರ ಈವರೆಗೆ ತೀರ್ಮಾನ ಕೈಗೊಂಡಿಲ್ಲ ಎಂದು ತಿಳಿಸಿದರು.
