ಎಷ್ಟೇ ಚಿರಾಡಲಿ, ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವುದಿಲ್ಲ : ಪ್ರಿಯಾಂಕ್ ಖರ್ಗೆ – vishwanews24

Featured, ರಾಜ್ಯ ನ್ಯೂಸ್

ಎಷ್ಟೇ ಚಿರಾಡಲಿ, ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವುದಿಲ್ಲ : ಪ್ರಿಯಾಂಕ್ ಖರ್ಗೆ

ಬೆಂಗಳೂರು: ಎಷ್ಟೇ ಚಿರಾಡಲಿ, ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ  ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿನ್‌ ಪಂಚಾಳ್‌ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ನಾನು ಪತ್ರ ಬರೆದಿದ್ದೆ. ಸಿಎಂ ಮತ್ತು ಗೃಹ ಸಚಿವರನ್ನು ಭೇಟಿಯಾಗಿ ಮಾಹಿತಿ ನೀಡಿ ಮನವಿ ಮಾಡಿದ್ದೆ. ಇದರಂತೆ ಈಗ ಗೃಹ ಸಚಿವರು ಸಿಐಡಿ ತನಿಖೆಗೆ ಆದೇಶ ಮಾಡಿದ್ದಾರೆ ಎಂದು ತಿಳಿಸಿದರು.

ಗುತ್ತಿಗೆದಾರ ಸಚಿನ್ ಪಾಂಚಾಳ ಕೇಸ್ ತನಿಖೆ ಸಿಐಡಿಗೆ : ಜಿ.ಪರಮೇಶ್ವರ್  – vishwanews24

ಬಿಜೆಪಿ ಅವರಿಗೆ ಸಿಬಿಐ ಮೇಲೆ ಪ್ರೀತಿ ಜಾಸ್ತಿ. ಹೀಗಾಗಿ ಸಿಬಿಐ ತನಿಖೆಗೆ ಕೇಳುತ್ತಾರೆ. ವರ್ಷಗಳ ಹಿಂದೆ ಬಿಜೆಪಿ ಕೈಯಲ್ಲಿ ಎಲ್ಲಾ ಸಂಸ್ಥೆಗಳು ಇತ್ತು ಏನ್ ಮಾಡಿದರು? ಬಿಜೆಪಿ ಯಾರದ್ದೋ ತಲೆ ದಂಡ ಆಗುತ್ತೆ ಅಂತ ಕಾಯ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಯಾರ ತಲೆ ತಂಡ ಆಗುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು.

ಕಲಬುರಗಿಗೆ ಮುತ್ತಿಗೆ ಹಾಕೋ ಎಚ್ಚರಿಕೆ ಕೊಟ್ಟಿರುವ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟ ಸಚಿವರು,ಕಲಬುರಗಿಗೆ ಮುತ್ತಿಗೆ ಹಾಕಲಿ ಯಾರು ಬೇಡ ಎಂದಿದ್ದಾರೆ. ನನ್ನ ವಿರುದ್ದ ಏನಾದರೂ ದಾಖಲಾತಿ ಇದ್ದರೆ ತಂದು ಕೊಡಿ. ನಿಮಗೆ ನಾಚಿಕೆ ಆಗಬೇಕು. ಯಾಕೆ ಕಲಬುರಗಿಗೆ ಮುತ್ತಿಗೆ ಹಾಕ್ತಾರೆ ಎಂದು ಪ್ರಶ್ನಿಸಿದರು.

ಹೊಸ ವರ್ಷ ಹಿನ್ನೆಲೆ : ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧ ತೆರವು – vishwanews24

 

Leave a Reply