ಎಸಿಡಿಟಿ ನಿವಾರಣೆಗೆ ಈ ಮನೆಮದ್ದು ಸಹಕರಿಸುತ್ತದೆ ಉಪಯೋಗಿಸಿ – Vishwanews24
ಅನಿಯಮಿತ ಆಹಾರ ಸೇವನೆ, ಆಹಾರ ಸರಿಯಾಗಿ ಜೀರ್ಣವಾಗದಿರುವುದು, ಸಾಕಷ್ಟು ನೀರು ಸೇವಿಸದಿರುವುದು, ಮಸಾಲೆಯುಕ್ತ ಹಾಗೂ ಜಂಕ್ ಫುಡ್ ಸೇವನೆ, ಒತ್ತಡ, ಧೂಮಪಾನ, ತುಂಬಾ ಹೊತ್ತು ಆಹಾರ ಸೇವಿಸದೆ ಇರೋದು ಎಸಿಡಿಟಿಗೆ ಕಾರಣವಾಗುತ್ತದೆ.ಹೊಟ್ಟೆ ಉರಿ, ಎದೆಯುರಿ, ಹುಳಿ ತೇಗು, ಕಡಿಮೆ ಹಸಿವು, ಹೊಟ್ಟೆ ಉಬ್ಬರ ಇವೆಲ್ಲವೂ ಎಸಿಡಿಟಿಯ ಲಕ್ಷಣವಾಗಿದೆ.
ಹೊಟ್ಟೆ, ಜೀರ್ಣಕ್ರಿಯೆಗೆ ಸಂಬಂಧಿತ ಅನೇಕ ಸಮಸ್ಯೆಗೆ ಮಜ್ಜಿಗೆ ರಾಮಬಾಣ. ಎಸಿಡಿಟಿ ಆಗದಂತೆ ತಡೆಯಲು ಊಟದ ಬಳಿಕ ಮಜ್ಜಿಗೆ ಕುಡಿಯುವ ಪದ್ದತಿ ಈಗಲೂ ಇದೆ. ಎಸಿಡಿಟಿ ಆದಲ್ಲಿ, ತಂಪಾದ ಮಜ್ಜಿಗೆ ನಿಯಮಿತವಾಗಿ ಸೇವಿಸುವುದು ಒಳ್ಳೆಯದು.
ಶುಂಠಿ ರಸಕ್ಕೆ ನಿಂಬೆ ರಸ ಹಾಗೂ ಜೇನು ತುಪ್ಪ ಸೇರಿಸಿ ಕುಡಿಯಿರಿ. ಇದು ಹೊಟ್ಟೆಯುರಿ ಕಡಿಮೆ ಮಾಡಿ ಎಸಿಡಿಟಿ ಸಮಸ್ಯೆಯಿಂದ ಮುಕ್ತಿ ನೀಡುತ್ತದೆ.
ಅಶ್ವಗಂಧ
ಹೊಟ್ಟೆ ತುಂಬಿದ್ದರೂ ಹೊಟ್ಟೆಯುರಿ ಕಾಡುತ್ತಿದ್ದರೆ ಅಶ್ವಗಂಧವನ್ನು ಸೇವನೆ ಮಾಡಿ. ಇದ್ರಿಂದ ಸಾಕಷ್ಟು ಪ್ರಯೋಜನಗಳಿವೆ.ಹಿಂದಿನವರು ಕೂಡ ಎಸಿಡಿಟಿ ಸಮಸ್ಯೆಗೆ ಚಂದನವನ್ನು ಬಳಸುತ್ತಿದ್ದರು. ಇದು ಹೊಟ್ಟೆಯುರಿ, ಎದೆಯುರಿ, ವಾಕರಿಕೆ ಸೇರಿದಂತೆ ಎಲ್ಲ ಸಮಸ್ಯೆಗಳನ್ನು ದೂರ ಮಾಡುತ್ತದೆ.
ತಂಪಾದ ಹಾಲು
ತುಳಸಿ
ಜೀರ್ಣಕ್ರಿಯೆಯನ್ನು ಸರಿಪಡಿಸುವಲ್ಲಿ ತುಳಸಿಯನ್ನು ಔಷಧಿ ಎಂದೇ ಪರಿಗಣಿಸಲಾಗುತ್ತದೆ. ಅಷ್ಟು ಮಾತ್ರ ಅಲ್ಲ, ಆಯುರ್ವೇದದಲ್ಲಿ ತುಳಸಿ ರಸ ಔಷಧವೆಂದೇ ಪರಿಗಣಿಸಲಾಗಿದೆ. ತುಳಸಿ ಎಲೆಯನ್ನು ಹಾಗೆಯೇ ತಿನ್ನಬಹುದು, ಅಥವಾ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಿಯೂ ಸೇವಿಸಬಹುದು. ಇದನ್ನು ನಿಮ್ಮ ಊಟದ ಬಳಿಕ ಸೇವಿಸಿದರೆ ಇನ್ನೂ ಒಳ್ಳೆಯದು
ಜೀರಿಗೆ
ಇದಲ್ಲದೆ, ಜೀರಿಗೆಯೂ ಹೊಟ್ಟೆಯ ಸಮಸ್ಯೆಗಳನ್ನು ದೂರವಾಗಿಸಲು ಬಳಸುತ್ತಾರೆ. ಜೀರಿಗೆಯನ್ನು ನೇರ ಬಾಯಿಗೆ ಹಾಕಬಹುದು ಅಥವಾ ಅವನ್ನು ನೀರಿನಲ್ಲಿ ಕುದಿಸಿ, ಬಿಸಿ ನೀರನ್ನೂ ಕುಡಿಯುವುದರಿಂದ ಹೆಚ್ಚು ಅನುಕೂಲವಾಗುತ್ತದೆ.
ಬಾಳೆಹಣ್ಣು
ಪೊಟ್ಯಾಷಿಯಂ ಅಂಶವನ್ನು ಹೊಂದಿರುವ ಬಾಳೆ ಹಣ್ಣುಗಳು ಹೊಟ್ಟೆಯಲ್ಲಿ ಆ್ಯಸಿಡ್ ಪ್ರಮಾಣವನ್ನು ನಿಯಂತ್ರಿಸುವಲ್ಲಿ ಉತ್ತಮ ಕೆಲಸ ಮಾಡುತ್ತದೆ. ಅಲ್ಲದೆ ಜೀರ್ಣಕ್ರಿಯೆಗೂ ಬಾಳೆಹಣ್ಣು ಸಹಕಾರಿ.
