ಎಸ್‌ಡಿಪಿಐನಲ್ಲಿ ಇರುವ ಮುಸ್ಲಿಮರು ಸಮಾಜಘಾತುಕ ಶಕ್ತಿಗಳು : ಪ್ರತಾಪ‌ ಸಿಂಹ-Vishwanews24

Featured, ರಾಜ್ಯ ನ್ಯೂಸ್

ಮಡಿಕೇರಿ: ‘ಎಸ್‌ಡಿಪಿಐನಲ್ಲಿ ಗುರುತಿಸಿಕೊಂಡಿರುವ ಮುಸ್ಲಿಮರು ಪುಂಡ ಮುಸ್ಲಿಮರು’ ಎಂದು ಸಂಸದ ಪ್ರತಾಪ‌ ಸಿಂಹ ವಾಗ್ದಾಳಿ ನಡೆಸಿದರು.

‘ನಿಜವಾದ ಮುಸ್ಲಿಮರಿಗೂ, ಎಸ್‌ಡಿಪಿಐನಲ್ಲಿ ಇರುವ ಮುಸ್ಲಿಮರಿಗೂ ಸಾಕಷ್ಟು ವ್ಯತ್ಯಾಸವಿದೆ. ನಿಜವಾದ ಮುಸ್ಲಿಮರು, ಈ ದೇಶದ ಬಗ್ಗೆ ಕಾಳಜಿ ಇಟ್ಟುಕೊಂಡು ಜನರನ್ನು ಪ್ರೀತಿಸುತ್ತಿದ್ದಾರೆ. ಆದರೆ, ಎಸ್‌ಡಿಪಿಐನಲ್ಲಿ ಇರುವ ಮುಸ್ಲಿಮರು ಸಮಾಜಘಾತುಕ ಶಕ್ತಿಗಳು’ ಎಂದು ಭಾಗಮಂಡಲದಲ್ಲಿ ಶನಿವಾರ ಹೇಳಿದರು.

‘ಮೊದಲು ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದ ಎಸ್‌ಡಿ‍ಪಿಐ ಕಾರ್ಯಕರ್ತರು, ಈಗ ಕಾಂಗ್ರೆಸ್‌ ಮುಖಂಡರ ಮೇಲೆಯೇ ದಾಳಿ ನಡೆಸಲು ಶುರು ಮಾಡಿದ್ದಾರೆ. ರಾಜಕೀಯ ಪಕ್ಷವಾಗಿ ಕೆಲಸ ಮಾಡುತ್ತಿರುವ ಎಸ್‌ಡಿಪಿಐ ಅನ್ನು ನಿಷೇಧ ಮಾಡುವುದಕ್ಕೆ ಕೆಲವು ಮಾನದಂಡಗಳಿವೆ. ಆ ಪ್ರಕಾರವೇ ಎಸ್‌ಡಿಪಿಐ ಅನ್ನು ನಿಷೇಧ ಮಾಡುತ್ತೇವೆ’ ಎಂದರು.

‘ಈ ಹಿಂದೆ ನಡೆದಿದ್ದ ಕೆಲವು ಹತ್ಯೆ, ದಾಳಿಯಲ್ಲೂ ಎಸ್‌ಡಿಪಿಐ, ಪಿಐಎಫ್‌ ಪಾತ್ರವಿರುವುದು ಸಾಬೀತಾಗಿದೆ. ಕೇಂದ್ರಕ್ಕೆ ರಾಜ್ಯದಿಂದ ಸಮರ್ಥವಾದ ವರದಿ ಹೋಗಲಿದೆ. ಬಳಿಕ ಕೇಂದ್ರವು ಕ್ರಮ ಕೈಗೊಳ್ಳಲಿದೆ’ ಎಂದರು.