ಏಪ್ರಿಲ್ 6 ರಂದು ಕಾಂಗ್ರೆಸ್ ಪಕ್ಷಕ್ಕೆ ಶತ್ರುಘ್ನ ಸಿನ್ಹಾ ಸೇರ್ಪಡೆ ; ರಾಹುಲ್ ಗಾಂಧಿ, ದೇಶದ ಜನಪ್ರಿಯ ನಾಯಕ, ದೇಶ ನಿರ್ಮಾಣ ಕಾರ್ಯದಲ್ಲಿ ಗಾಂಧಿ ಕುಟುಂಬ ಪ್ರಮುಖ ಪಾತ್ರ ನಿರ್ವಹಿಸಿದೆ- Vishwanews24
ನವದೆಹಲಿ : ಬಿಜೆಪಿ ಬಂಡಾಯ ನಾಯಕ ಶತ್ರುಘ್ನ ಸಿನ್ಹಾ ಅವರು ಏಪ್ರಿಲ್ 6 ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಶಕ್ತಿಕಾಂತ್ ಗೋಹಿಲ್ ಟ್ವೀಟ್ ಮಾಡಿದ್ದಾರೆ.
ನವದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಶತ್ರುಘ್ನ ಸಿನ್ಹಾ, ವಯಸ್ಸಿನಲ್ಲಿ ನನಗಿಂತ ಕಿರಿಯರಾದರೂ ರಾಹುಲ್ ಗಾಂಧಿ, ದೇಶದ ಜನಪ್ರಿಯ ನಾಯಕ,
ರಾಹುಲ್ ಗಾಂಧಿ ನಾಯಕತ್ವವನ್ನು ಬಗ್ಗೆ ಮಾತನಾಡಿದ ಅವರು ರಾಹುಲ್ ಗಾಂಧಿ ಸಾಕಷ್ಟು ಧನಾತ್ಮಕ ಗುಣಗಳನ್ನು ಹೊಂದಿದ್ದಾರೆ. ಪ್ರತಿಯೊಬ್ಬರನ್ನೂ ಪ್ರೋತ್ಸಾಹಿಸುತ್ತಾರೆ. ವಯಸ್ಸಿನಲ್ಲಿ ನನಗಿಂತ ಕಿರಿಯನಾದರೂ, ಇಂದು ಆತ ದೇಶದ ಜನಪ್ರಿಯ ನಾಯಕರಾಗಿದ್ದಾರೆ ಎಂದು ಹೇಳಿದ್ದಾರೆ. ನಾನು ನೆಹರು-ಗಾಂಧಿ ಕುಟುಂಬದ ಬೆಂಬಲಿಗ. ಈಗ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಅಂತೆಯೇ ಇಂದು ನಾನು ಬಿಜೆಪಿ ತೊರೆಯುತ್ತಿರುವುದಕ್ಕೆ ಅಲ್ಲಿನ ಸರ್ವಾಧಿಕಾರಿ ಧೋರಣೆಯೇ ಕಾರಣ. ಇದೇ ಕಾರಣಕ್ಕಾಗಿ ನಾನು ಇಂದು ತುಂಬಾ ನೋವಿನಿಂದ ಬಿಜೆಪಿ ತೊರೆಯುತ್ತಿದ್ದು, ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಹೇಳಿದ್ದಾರೆ.
ಪಟನಾ ಸಾಹಿಬ್ ಕ್ಷೇತ್ರದಿಂದಲೇ ಶತ್ರುಘ್ನ ಸಿನ್ಹಾ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ಬಿಹಾರ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಪ್ರಸಾದ್ ಸಿಂಗ್ ಘೋಷಿಸಿದ್ದಾರೆ. ಎರಡು ವರ್ಷಗಳಿಂದ ಬಿಜೆಪಿ ಹಾಗೂ ಮೋದಿ ಅವರನ್ನು ಕಟುವಾಗಿ ಟೀಕಿಸುತ್ತಿದ್ದ ಶತ್ರುಘ್ನ ಸಿನ್ಹಾ ಅವರಿಗೆ ಈ ಸಲ ಟಿಕೆಟ್ ನೀಡಿಲ್ಲ.
