ಕಟೀಲು ದೇವಳಕ್ಕೆ ಕಾಂತಾರ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಭೇಟಿ – vishwanews24
ಕಟೀಲು ದೇವಳಕ್ಕೆ ಕಾಂತಾರ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಭೇಟಿ
ಮಂಗಳೂರು: ಕರಾವಳಿಯ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಕಾಂತಾರ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಅವರು ಭೇಟಿ ನೀಡಿದರು.
ಚಿತ್ರದ ಅದ್ಭುತ ಯಶಸ್ಸಿನ ಹಿನ್ನೆಲೆಯಲ್ಲಿ ವಿಜಯ್ ಕಿರಗಂದೂರು ಅವರು ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಿಯ ಕೃಪೆಗಾಗಿ ಮೊರೆ ಹೋಗಿದ್ದ ಅವರು, ಸ್ನೇಹಿತರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ್ದರು.
ಪೂಜಾ ವಿಧಿಗಳನ್ನು ಮುಗಿಸಿದ ನಂತರ ಅವರು ಕ್ಷೇತ್ರದ ಅನ್ನಪ್ರಸಾದವನ್ನು ಸ್ವೀಕರಿಸಿದರು.
