ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಿರ್ಮಾಪಕಿ ಎಕ್ತಾ ಕಪೂರ್ – vishwanews24

Featured, ದಕ್ಷಿಣ ಕನ್ನಡ

ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಿರ್ಮಾಪಕಿ ಎಕ್ತಾ ಕಪೂರ್

ಬಾಲಿವುಡ್  ನಿರ್ದೇಶಕಿ ಕಮ್ ನಿರ್ಮಾಪಕಿ ಎಕ್ತಾ ಕಪೂರ್ ಇದೀಗ ಮಂಗಳೂರಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕುಟುಂಬದ ಜೊತೆ ಕಟೀಲು ದುರ್ಗಾಪರಮೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಎಕ್ತಾ ಕಪೂರ್, ಈಗ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೆಲ ಸಮಯ ದೇವಸ್ಥಾನದಲ್ಲಿ ಕುಟುಂಬದ ಜೊತೆ ಸಮಯ ಕಳೆದಿದ್ದಾರೆ. ಬಳಿಕ ದೇವಸ್ಥಾನದ ವತಿಯಿಂದ ದೇವರ ವಿಶೇಷ ವಸ್ತ್ರ ನೀಡಿ ಗೌರವಿದ್ದಾರೆ. ನಂತರ ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಎಕ್ತಾ ಕಪೂರ್ ಕುಟುಂಬ ಭೇಟಿ ಕೊಟ್ಟಿದ್ದಾರೆ.

ಮಳೆ ಹಾನಿ ಪರಿಹಾರಕ್ಕೆ ಎಲ್ಲಾ ಜಿಲ್ಲೆಗಳಿಗೆ 777.54 ಕೋಟಿ ರೂ. ಹಣ ಬಿಡುಗಡೆ  – vishwanews24

ಇನ್ನೂ ಹಿಂದಿ ಸಿನಿಮಾರಂಗದಲ್ಲಿ ಸೀರಿಯಲ್ ಮತ್ತು ಸಿನಿಮಾ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ಎಕ್ ವಿಲನ್, ಬಿಗ್ ಬಿ ಮತ್ತು ರಶ್ಮಿಕಾ ನಟನೆಯ ‘ಗುಡ್ ಬೈ’ ಸಿನಿಮಾ, ಯೂ ಟರ್ನ್ ಚಿತ್ರ ಸೇರಿದಂತೆ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.

Leave a Reply