ಕಡಲ್ಕೊರೆತ ತಡೆಗೆ ಕರಾವಳಿ ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಅನುದಾನ ಬಿಡುಗಡೆ : ಲಕ್ಷ್ಮೀ  ಹೆಬ್ಬಾಳ್ಕರ್ – vishwanews24

Featured, ಉಡುಪಿ

ಕಡಲ್ಕೊರೆತ ತಡೆಗೆ ದ. ಕ., ಉಡುಪಿ ಮತ್ತು ಉ. ಕ. ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಅನುದಾನ ಬಿಡುಗಡೆ : ಲಕ್ಷ್ಮೀ  ಹೆಬ್ಬಾಳ್ಕರ್

ಉಡುಪಿ: ಕಡಲ್ಕೊರೆತ ತಡೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬುಧವಾರ ತಿಳಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ‘ ಕಡಲ್ಕೊರೆತ ವಿಚಾರಕ್ಕೆ ಸಂಬಂಧಿಸಿ ಹಿಂದಿನ 10 ಕೋಟಿ ರೂ.ಬಿಲ್ ಬಾಕಿ ಇದೆ ಅದನ್ನೂ ಬಿಡುಗಡೆ ಮಾಡಲಾಗುತ್ತದೆ. ಕಡಲ್ಕೊರೆತ ಶಾಶ್ವತ ಪರಿಹಾರಕ್ಕೆ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಇದಕ್ಕೆ ರಾಜ್ಯ ಸರಕಾರದಿಂದ ಮಾತ್ರ ಪರಿಹಾರ ನೀಡುವುದು ಸಾಧ್ಯವಿಲ್ಲ.ಕೇಂದ್ರ ಮತ್ತು ರಾಜ್ಯ ಸರಕಾರ’ ಸಮನ್ವಯತೆಯೊಂದಿಗೆ ಕೆಲಸ ಮಾಡಬೇಕಾಗಿದೆ’ ಎಂದರು.

ಪೋಕ್ಸೋ ಪ್ರಕರಣ: ಯಡಿಯೂರಪ್ಪ ಬಂಧನ ಕೋರಿ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಕೆ – vishwanews24

 

‘ಉಡುಪಿ ಜಿಲ್ಲೆಯಲ್ಲಿ ಬಸ್ ಕೊರತೆ ವಿಚಾರ ಗಮನಕ್ಕೆ ಬಂದಿದ್ದು, ಕೊರತೆ ನೀಗಿಸಲು ಸಾರಿಗೆ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ. 3 ಸಾವಿರ ಸಾವಿರ ಬಸ್ ಗಳ ಖರೀದಿ ಆಗಿದ್ದು ಅವುಗಳ ಪೈಕಿ ಕೆಲವನ್ನು ಇಲ್ಲಿಗೆ ತರುವ ಪ್ರಯತ್ನ ಮಾಡುತ್ತೇವೆ’ ಎಂದರು.

ಸುಳ್ಯ: ಮಹಿಳೆ ಹತ್ಯೆ ಪ್ರಕರಣ ; ಆರೋಪಿ ಅರೆಸ್ಟ್ – vishwanews24

Leave a Reply