ಕನ್ನಡ ಧ್ವಜ ಹಾರಿಸಿದ ವಿದ್ಯಾರ್ಥಿಗೆ ಹಲ್ಲೆ ಪ್ರಕರಣ : ತನಿಖೆಗೆ ಸಿಎಂ ಸೂಚನೆ  – Vishwanews24

Featured, ರಾಜ್ಯ ನ್ಯೂಸ್

ಕನ್ನಡ ಧ್ವಜ ಹಾರಿಸಿದ ವಿದ್ಯಾರ್ಥಿಗೆ ಹಲ್ಲೆ ಪ್ರಕರಣ ತನಿಖೆಗೆ ಸಿಎಂ ಸೂಚನೆ ..

ಹುಬ್ಬಳ್ಳಿ : ಬೆಳಗಾವಿಯಲ್ಲಿ ಕನ್ನಡ ಧ್ವಜ ಹಿಡಿದು ಡಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಯನ್ನು ದುಷ್ಕರ್ಮಿಗಳು ಹಲ್ಲೆ ಮಾಡಿರುವ ವಿಚಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ ಸಂಬಂಧ ತನಿಖೆಗೆ ಸೂಚನೆ ನೀಡಲಾಗಿದೆ. ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳಲಾಗುತ್ತದೆ. ಪೊಲೀಸರು ಯುವಕನಿಗೆ ಹಲ್ಲೆ ಮಾಡಿಲ್ಲ ಎಂದಿದ್ದಾರೆ. ಮಹಾರಾಷ್ಟ್ರದವರು ಅನಗತ್ಯವಾಗಿ ವಿವಾದ ಮಾಡುತ್ತಿದ್ದಾರೆ ಎಂದಿದ್ದಾರೆ.

ಕನ್ನಡ ಧ್ವಜ ಹಿಡಿದು ಡಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಯನ್ನು ಕೆಲವು ದುಷ್ಕರ್ಮಿಗಳು ಥಳಿಸಿರುವ ಘಟನೆ ಟಿಳಕವಾಡಿಯ ಕಾಲೇಜೊಂದರಲ್ಲಿ ನಡೆದಿದ್ದು, ಕಾರ್ಯಕ್ರಮದ ಸಂದರ್ಭದಲ್ಲಿ ಕನ್ನಡ ಧ್ವಜ ಹಿಡಿದು ಡಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಯನ್ನು ಥಳಿಸಲಾಗಿದೆ. ಇದರಿಂದಾಗಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ರಾಜ್ಯದಲ್ಲಿ ರಾಜಕೀಯದ ಸುನಾಮಿ ಅಲೆ JDS ಪರ, ಎಲ್ಲ ಪಕ್ಷಗಳೂ ಕೊಚ್ಚಿ ಹೋಗಿ ಬಹುಮತದೊಂದಿಗೆ JDS ಅಧಿಕಾರಕ್ಕೆ :ಎಚ್‌.ಡಿ. ಕುಮಾರಸ್ವಾಮಿ – Vishwanews24

Leave a Reply