ಕರಾವಳಿಯಲ್ಲಿ ಮತ್ತೆ 3 ದಿನ ಭಾರೀ ಮಳೆಯಾಗುವ ಸೂಚನೆ..; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರ

Featured, ಉಡುಪಿ, ದಕ್ಷಿಣ ಕನ್ನಡ

ಮಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಭಾಗಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಉತ್ತಮ‌ ಮಳೆಯಾಗಲಿದೆ. ಇಂದು ರಾತ್ರಿ ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ನೈಸರ್ಗಿಕ ವಿಕೋಪ ಕೇಂದ್ರದ ನಿರ್ದೇಶಕ ಶ್ರೀನಿವಾಸರೆಡ್ಡಿ ಮಾಹಿತಿ ನೀಡಿದ್ದಾರೆ. ರಾಜ್ಯ ರಾಜಧಾನಿಯ ವಿಧಾನಸೌಧ, ಕಾರ್ಪೋರೇಷನ್​ ವೃತ್ತ, ಬಸವನಗುಡಿ ಸೇರಿದಂತೆ ಹಲವು ಭಾಗಗಳಲ್ಲಿ ಭರ್ಜರಿ ಮಳೆಯಾಗಿದ್ದು, ರಸ್ತೆಗಳೆಲ್ಲ ಕೆರೆಗಳಂತಾದ ದೃಶ್ಯ ಕಂಡುಬಂದಿತು.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣದಿಂದ ಕರಾವಳಿ ಭಾಗದಲ್ಲಿ ದೊಡ್ಡ ಚಂಡಮಾರುತ ಸೃಷ್ಟಿಯಾಗುವ ಭೀತಿ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 7 ಮತ್ತು 8 ರಂದು ಬಹಳ ತೀವ್ರತರದ ಚಂಡಮಾರುತ ಆರ್ಭಟಸಲಿದೆಯಂತೆ.  ಈ ವಾರ ಮತ್ತೆ ಪ್ರವಾಹ ವಕ್ಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅಕ್ಟೋಬರ್ 6 ರ ನಂತರ ಮೀನುಗಾರರು ಸಮುದ್ರಕ್ಕೆ ಇಳಿಯಬಾರದೆಂದು ತುರ್ತು ಕಾರ್ಯಾಚರಣೆ ಕೇಂದ್ರವು ಕಟ್ಟುನಿಟ್ಟು ಸೂಚನೆ ರವಾನಿಸಿದೆ.