ಕರಾವಳಿಯಲ್ಲಿ ಮಳೆಯ ಅಬ್ಬರ  : ಎರಡು ದಿನ ಬಾರೀ ಮಳೆ –  ಸಾಧ್ಯತೆ ರೆಡ್ ಅಲರ್ಟ್  ಘೋಷಣೆ – vishwanews24

Featured, ದಕ್ಷಿಣ ಕನ್ನಡ

ಕರಾವಳಿಯಲ್ಲಿ ಮಳೆಯ ಅಬ್ಬರ  : ಎರಡು ದಿನ ಬಾರೀ ಮಳೆ –  ಸಾಧ್ಯತೆ ರೆಡ್ ಅಲರ್ಟ್  ಘೋಷಣೆ

ಮಂಗಳೂರು : ಕರ್ನಾಟಕದ ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಇನ್ನೂ ಎರಡು ದಿನಗಳ ಕಾಲ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕ ಕರಾವಳಿಯಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿಯೇ ಇದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಇನ್ನೂ ಬಿಡುವು ಪಡೆದಿಲ್ಲ. ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ತಾಂತ್ರಿಕ ದೋಷ: ದಿಲ್ಲಿ- ಮುಂಬೈ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಹಾರಾಟ ಸ್ಥಗಿತ – vishwanews24

ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ಗಾಳಿಯ ವೇಗ ತುಸು ಹೆಚ್ಚಳವಾಗಿರುವುದರಿಂದ ಕಡಲತೀರದ ನಿವಾಸಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಜುಲೈ 26ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

Leave a Reply