ಕರಾವಳಿಯಲ್ಲಿ ಮಳೆಯ ಅಬ್ಬರ ; ಜುಲೈ 5ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ – Vishwanews24

Featured, ರಾಜ್ಯ ನ್ಯೂಸ್

ಕರಾವಳಿಯಲ್ಲಿ ಮಳೆಯ ಅಬ್ಬರ ; ಜುಲೈ 5ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ರಾಜ್ಯಾದ್ಯಂತ ಮುಂಗಾರಿನ ಪರಿಣಾಮ ಹೆಚ್ಚಾಗಲಿದೆ. ಜುಲೈ 5ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್‌ ಹೇಳಿದ್ದಾರೆ.

ಇಂದು ಮತ್ತು ಜು.5 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆಯ ಆರ್ಭಟಕ್ಕೆ ನಲುಗಿರುವ ಕರಾವಳಿಯಲ್ಲಿ ಮತ್ತೆ ಐದು ದಿನ ಮಳೆಯ ರಣಾರ್ಭಟ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ನೈರುತ್ಯ ಮುಂಗಾರು ಮಳೆ ಚುರುಕುಗೊಂಡಿದೆ. ಮೇಲ್ಮೈ ಸುಳಿಗಾಳಿಯ ಪರಿಣಾಮ ಕರಾವಳಿ ಭಾಗದ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗಲಿದೆ. 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ವಿವಾದಾತ್ಮಕ ಹೇಳಿಕೆ ಕುರಿತು ಇಡೀ ದೇಶದ ಜನರ ಕ್ಷಮೆ ಯಾಚಿಸಿ : ನೂಪುರ್ ಶರ್ಮಾಗೆ ಸುಪ್ರೀಂ ಕೋರ್ಟ್​ – Vishwanews24

Leave a Reply