ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

Featured, ರಾಜ್ಯ ನ್ಯೂಸ್

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ

ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ (ಆಗಸ್ಟ್ 15) ಅಂಗವಾಗಿ ಕೇಂದ್ರ ಗೃಹ ಸಚಿವಾಲಯವು ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ ‘ರಾಷ್ಟ್ರಪತಿ ಪದಕ-2026’ ಪ್ರಶಸ್ತಿಯನ್ನು ಘೋಷಿಸಿದೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಒಟ್ಟು 17 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಬಾರಿಯ ರಾಷ್ಟ್ರಪತಿ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ವಿಶಿಷ್ಟ ಸೇವಾ ಪದಕ
ಪೊಲೀಸ್ ಪಡೆಯಲ್ಲಿ ಅತ್ಯಂತ ವಿಶಿಷ್ಟ ಹಾಗೂ ಸುದೀರ್ಘ ಸೇವೆ ಸಲ್ಲಿಸಿದ ಸಿಸಿಬಿಯ ಸಹಾಯಕ ಪೊಲೀಸ್ ಕಮಿಷನರ್ಹೆಚ್.ಎನ್. ಧರ್ಮೇಂದ್ರ ಅವರಿಗೆ ಪ್ರತಿಷ್ಠಿತ ‘ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ’ ಗೌರವ ಒಲಿದುಬಂದಿದೆ.

ಶ್ಲಾಘನೀಯ ಸೇವಾ ಪದಕ ಪುರಸ್ಕೃತರು :
ರಾಜ್ಯದ ವಿವಿಧ ವಿಭಾಗಗಳು, ಕಮಿಷನರೇಟ್ ಹಾಗೂ ಜಿಲ್ಲೆಗಳಲ್ಲಿ ಶ್ಲಾಘನೀಯ ಸೇವೆ ಸಲ್ಲಿಸಿದ 16 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಘೋಷಣೆಯಾಗಿದೆ.

ಸಾರಾ ಫಾತಿಮಾ – ಎಸ್ಪಿ, ರೈಲ್ವೇಸ್, ಬೆಂಗಳೂರು

ಥಾಮಸ್ ಮ್ಯಾಥ್ಯೂ – ಕಮಾಂಡೆಂಟ್, ಕೆ.ಎಸ್.ಆರ್.ಪಿ

ಮಹಾದೇವ್ – ಎಸಿಪಿ, ಆಗ್ನೇಯ ಸಂಚಾರ ವಿಭಾಗ, ಬೆಂಗಳೂರು

ಪರಮಾನಂದ್ – ಡಿವೈಎಸ್ಪಿ , ಡಿ.ಎ.ಆರ್ , ರಾಯಚೂರು

ಷಣ್ಮುಗವರ್ಮಾ – ಪೊಲೀಸ್ ಇನ್ಸ್‌ಪೆಕ್ಟರ್, ಪೊಲೀಸ್ ತರಬೇತಿ ಶಾಲೆ, ಮೈಸೂರು

ಭಾವುದ್ದೀನ್ ರುಕ್ಮುದ್ದೀನ್ -ಪೊಲೀಸ್ ಇನ್ಸ್‌ಪೆಕ್ಟರ್, ಮಾಳಮಾರುತಿ ಠಾಣೆ, ಬೆಳಗಾವಿ

ಗುರುಪ್ರಸಾದ್ ಗೋಪಾಲ್ ನಾಯಕ್ – ಇನ್ಸ್‌ಪೆಕ್ಟರ್, ಸಿಐಡಿ

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

ನಯೀಂ – ರಿಸರ್ವ್ ಪೊಲೀಸ್ ಇನ್ಸ್‌ಪೆಕ್ಟರ್ , ರಾಜಭವನ

ಶ್ರೀನಿವಾಸ – ಪಿ.ಎಸ್.ಐ , ಕೆ.ಪಿ. ಅಗ್ರಹಾರ ಠಾಣೆ, ಬೆಂಗಳೂರು

ಜ್ಞಾನದೇವ್ ನವಲ ತರಾಸೆ – ಎ.ಆರ್.ಎಸ್.ಐ, ಕೆ.ಎಸ್.ಆರ್.ಪಿ

ಮಹದೇವಸ್ವಾಮಿ – ಹೆಡ್ ಕಾನ್ಸ್‌ಟೇಬಲ್, ವಿಧಾನಸೌಧ ಭದ್ರತೆ

ಮಾರಿಯಾ ಜೋಸೆಫ್ ದಿನೇಶ್ ಕುಮಾರ್ – ಹೆಡ್ ಕಾನ್ಸ್‌ಟೇಬಲ್, ಡಿ.ಸಿ.ಆರ್.ಇ , ಕೆಜಿಎಫ್

ಚಂದ್ರಶೇಖರ ಚಿಕ್ಕಣ್ಣನವರ್ – ಹೆಡ್ ಕಾನ್ಸ್‌ಟೇಬಲ್, ಕೆ.ಎಸ್.ಆರ್.ಪಿ

ಅಬ್ದುಲ್ ಕಮಾಲ್ – ಹೆಡ್ ಕಾನ್ಸ್‌ಟೇಬಲ್, ತರೀಕೆರೆ ಠಾಣೆ

ನಾಗೇಶ್ ಮಚ್ಚಯ್ಯ – ಹೆಡ್ ಕಾನ್ಸ್‌ಟೇಬಲ್, ಸಿಐಡಿ

ಮನೋಹರ್ – ಪೊಲೀಸ್ ಕಾನ್ಸ್‌ಟೇಬಲ್, ಹುಣಸೂರು ಠಾಣೆ

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

Leave a Reply