ಕಲುಷಿತ ನೀರು ಸೇವಿಸಿ ಸಾವು ; ಕುಟುಂಬಕ್ಕೆ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ – Vishwanews24

Featured, ರಾಜ್ಯ ನ್ಯೂಸ್

ಕಲುಷಿತ ನೀರು ಸೇವಿಸಿ ಸಾವು ; ಕುಟುಂಬಕ್ಕೆ ತಲಾ ₹3 ಲಕ್ಷ ಪರಿಹಾರ ಘೋಷಿಸಿದ ಸಿಎಂ – Vishwanews24

ಬೆಂಗಳೂರು : ವಿಜಯನಗರದ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಈ ಕುರಿತು ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಕರಬ್ಬಿ ಗ್ರಾಮದಲ್ಲಿ ನಡೆದ ಪ್ರಕರಣ ದುಃಖದ ಸಂಗತಿಯಾಗಿದ್ದು, ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಘಟನೆಯಲ್ಲಿ ಸಾವನ್ನಪ್ಪಿದ ಪ್ರತಿ ಕುಟುಂಬಕ್ಕೆ 3 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ” ಎಂದರು.

ಇನ್ನು ಪ್ರಕರಣ ಕುರಿತು ಸಮಗ್ರ ತನಿಖೆ ನಡೆಸಿ, ವರದಿ ನೀಡಲು ಸೂಚನೆ ನೀಡಲಾಗಿ” ಎಂದಿದ್ದಾರೆ.

ಕಾಸರಗೋಡು: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುಂಟಾರು ರವೀಶ ತಂತ್ರಿ ನೇಮಕ – Vishwanews24

ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ ಇಂದು 6ಕ್ಕೆ ಏರಿದ್ದು, ಕಳೆದೊಂದು ವಾರದಿಂದ ಘಟನೆಯಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆ ಇಂದು ನೂತನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ. ಅರುಣ್​ ಕೆ ಮಕರಬ್ಬಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.

ಇನ್ನು ಕಲುಷಿತ ನೀರು ಸೇವನೆಯಿಂದ ವಾಂತಿಭೇದಿಯಿಂದ ಈಗಾಗಲೇ 6 ಜನರು ಮೃತಪಟ್ಟಿದ್ದು, ಅನೇಕ ಮಂದಿ ಅಸ್ವಸ್ಥರಾಗಿದ್ದಾರೆ. ಹೀಗಾಗಿ ಆತಂಕದ ಜನರು ಗ್ರಾಮವನ್ನು ತೊರೆದು ಸಂಬಂಧಿಕರ ಮನೆಗೆ ತೆರಳಿದ್ದು,ಶಾಲೆಗೆ ತಾತ್ಕಾಲಿಕವಾಗಿ ರಜೆ ಘೋಷಣೆ ಮಾಡಲಾಗಿದೆ.