ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ಎಸ್ ನಿಷೇಧಿಸುವುದಾಗಿ ಘೋಷಣೆ ; ಹೊಸ ವಿವಾದ ಸೃಷ್ಟಿಸಿದ ಕಾಂಗ್ರೆಸ್
ಭೋಪಾಲ್: ಚುನಾವಣಾ ಕಣ ಮಧ್ಯಪ್ರದೇಶದಲ್ಲಿ ಹೊಸ ವಿವಾದವೊಂದನ್ನು ಕಾಂಗ್ರೆಸ್ ಸೃಷ್ಟಿಸಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ಎಸ್ ನ್ನು ನಿಷೇಧಿಸುವುದಾಗಿ ಘೋಷಣೆ ಮಾಡಿದೆ.
ಪ್ರತಿ ಬಾರಿಯೂ ಆರ್ ಎಸ್ಎಸ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಿವಾದವನ್ನು ಮೈಮೇಲೆಳೆದುಕೊಳ್ಳುತ್ತಿದ್ದು, ಸುಮಾರು 15 ವರ್ಷಗಳಿಂದ ಕಾಂಗ್ರೆಸ್ ನ್ನು ಮಧ್ಯಪ್ರದೇಶದ ಜನತೆ ಅಧಿಕಾರದಿಂದ ದೂರವಿಟ್ಟಿದ್ದು, ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ಎಸ್ ಶಾಖೆಗಳನ್ನು ನಿಷೇಧಿಸಿ, ರಾಜ್ಯ ಸರ್ಕಾರಿ ನೌಕರರು ಆರ್ ಎಸ್ಎಸ್ ಶಾಖೆಗಳಿಗೆ ತೆರಳದಂತೆ ನಿರ್ಬಂಧ ವಿಧಿಸುವುದಾಗಿ ಕಾಂಗ್ರೆಸ್ ಹೇಳಿದೆ.
ಈಗ ಮಧ್ಯಪ್ರದೇಶದಲ್ಲಿ ಚುನಾವಣೆ ಗೆದ್ದರೆ ಆರ್ ಎಸ್ಎಸ್ ಶಾಖೆಗಳನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ಹೇಳಿದ್ದು, ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಈ ಹೇಳಿಕೆಯಿಂದ ಕಾಂಗ್ರೆಸ್ ಮನಸ್ಥಿತಿ ಬಯಲಾಗಿದ್ದು, ಕಾಂಗ್ರೆಸ್ ಮಂದಿರ ನಿರ್ಮಾಣಕ್ಕೂ ಅವಕಾಶ ನೀಡುವುದಿಲ್ಲ. ಶಾಖೆಗಳನ್ನೂ ನಡೆಸುವುದಕ್ಕೆ ಬಿಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.


