ಕಾಂಗ್ರೆಸ್ ಆಂತರಿಕ ಸಮೀಕ್ಷೆ ಪ್ರಕಾರ ದಕ್ಷಿಣ ಕನ್ನಡ, ಉಡುಪಿಯಲ್ಲಿ 10 ಸ್ಥಾನ ಗೆಲ್ಲುತ್ತೇವೆ : ಡಿಕೆ ಶಿ – Vishwanews24

Featured, ರಾಜ್ಯ ನ್ಯೂಸ್

ಕಾಂಗ್ರೆಸ್ ಆಂತರಿಕ ಸಮೀಕ್ಷೆ ಪ್ರಕಾರ ದಕ್ಷಿಣ ಕನ್ನಡ, ಉಡುಪಿಯಲ್ಲಿ 10 ಸ್ಥಾನ ಗೆಲ್ಲುತ್ತೇವೆ : ಡಿಕೆ ಶಿ

ಬೆಂಗಳೂರು : ಕಾಂಗ್ರೆಸ್ ಆಂತರಿಕ ಸಮೀಕ್ಷೆ ಪ್ರಕಾರ ದಕ್ಷಿಣ ಕನ್ನಡ, ಉಡುಪಿಯಲ್ಲಿ 10 ಸ್ಥಾನ ಗೆಲ್ಲುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಭವಿಷ್ಯ ನುಡಿದರು. ಬೆಂಗಳೂರಿನಲ್ಲಿ ಫೆ. 11 ರಂದು ಮಾತನಾಡಿದ ಅವರು, ಕರಾವಳಿಯಲ್ಲಿ ನಮ್ಮದೇ ಆಂತರಿಕ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆ ಪ್ರಕಾರ ಈ ಎರಡು ಜಿಲ್ಲೆಗಳಲ್ಲಿ 10 ಸ್ಥಾನ ಗೆಲ್ಲುತ್ತೇವೆ ಎಂದರು.

ಮಂಗಳೂರು ಭಾಗದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಪ್ರಚಾರ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಅಮಿತ್ ಶಾ ಪುತ್ತೂರಿನಲ್ಲಿ ರೋಡ್ ಶೋ ಮಾಡಬೇಕಿತ್ತು. ಆದರೆ ಪುತ್ತೂರು ರೋಡ್ ಶೋ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಅಮಿತ್ ಶಾಗೆ ಕಾನೂನು ಸುವ್ಯವಸ್ಥೆ ಸಮಸ್ಯೆ ಇದೆ ಅನ್ನುತ್ತಿದ್ದಾರೆ. ಹಾಗಾದರೆ ಸಾಮಾನ್ಯ ಜನರ ಪರಿಸ್ಥಿತಿ ಏನಿರಬಹುದು? ಎಂದು ಪ್ರಶ್ನಿಸಿದರು. ಸೆಂಟ್ರಲ್ ಹೋಂ ಮಿನಿಸ್ಟರ್ ಗೇ ಕಾನೂನು ರಕ್ಷಣೆ ಕೊಡಕ್ಕಾಗ್ತಿಲ್ಲ. ಹೋಂ ಮಿನಿಸ್ಟರಿಗೆ ರಾಜ್ಯದಲ್ಲಿ ರಕ್ಷಣೆ ಇಲ್ಲ ಅಂದ್ರೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು? ಇಂತ ಒಂದು ಸರ್ಕಾರ ಕಾನೂನಿಲ್ಲದ ಕಾನೂನು ಭಧ್ರತೆ ಇಲ್ಲದ ಸರ್ಕಾರ ಇಲ್ಲಿಗೇ ಕೊನೆಯಾಗಬೇಕು. ನಿಮ್ಮ ಮಾತುಗಳೇ ನಿಮ್ಮ ಮುಖದ ಕನ್ನಡಿ ನಿಮಗೆ ಸಾಕ್ಷಿ ಎಂದರು.

ಉಡುಪಿ : ಸಮಗ್ರ ಯಕ್ಷಗಾನ ಸಮ್ಮೇಳನ : ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ  ಭವ್ಯ ಮೆರವಣಿಗೆ – Vishwanews24

Leave a Reply