ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ : ಉಡುಪಿ ಕ್ಷೇತ್ರದಲ್ಲಿ ಪ್ರಸಾದ್ ರಾಜ್ ಕಾಂಚನ್ ಗೆ ಟಿಕೆಟ್ – Vshwanews24

Featured, ಉಡುಪಿ, ರಾಜ್ಯ ನ್ಯೂಸ್

ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ 

ಉಡುಪಿ ಸೇರಿ 42 ಕ್ಷೇತ್ರಗಳಿಗೆ ಟಿಕೆಟ್ ಫೈನಲ್

ಉಡುಪಿಗೆ ಪ್ರಸಾದ್ ರಾಜ್ ಕಾಂಚನ್ 

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು 42 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

Prasad Kanchan re-elected UCCI president | coastaldigest.com - The Trusted News Portal of India

ಭಾರೀ ಕುತೂಹಲ ಕೆರಳಿಸಿದ್ದ ಉಡುಪಿ ಕ್ಷೇತ್ರದಲ್ಲಿ ಪ್ರಸಾದ್ ರಾಜ್ ಕಾಂಚನ್ ಟಿಕೆಟ್ ಪಡೆದರೆ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಧಾರವಾಡದಲ್ಲಿ ಟಿಕೆಟ್ ಪಡೆದಿದ್ದಾರೆ. ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ, ಕಲಘಟಕಿ ಕ್ಷೇತ್ರದಿಂದ ಸಂತೋಷ್ ಲಾಡ್ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.

ಟೈಟ್ ಫೈಟ್ ಕ್ಷೇತ್ರವಾದ ಗಂಗಾವತಿಯಲ್ಲಿ ಇಕ್ಬಾಲ್ ಅನ್ಸಾರಿ, ಬಾದಾಮಿ ಬಿ.ಬಿ. ಚಿಮ್ಮನಕಟ್ಟಿ, ಗುಬ್ಬಿ ಕ್ಷೇತ್ರದಲ್ಲಿ ಎಸ್.ಆರ್.ಶ್ರೀನಿವಾಸ್ ಟಿಕೆಟ್ ಪಡೆದಿದ್ದಾರೆ.

ಕಿಚ್ಚ ಸುದೀಪ್ ನಿರ್ಧಾರ ನನಗೆ ನೋವು ತಂದಿದೆ : ಪ್ರಕಾಶ್ ರಾಜ್ – Vishwanews24

Leave a Reply