ಕಾಂಗ್ರೆಸ್ ಪಕ್ಷದ ನಾಯಕನನ್ನು ಹೆದರಿಸಲು ಮತ್ತು ಹತ್ತಿಕ್ಕಲು ಸಾಧ್ಯವಿಲ್ಲ : ರಾಹುಲ್ ಗಾಂಧಿ – Vishwanews24

Featured, ರಾಷ್ಟ್ರ ನ್ಯೂಸ್

ಇಡಿ ವಿಚಾರಣೆ ನನ್ನ ಮೇಲೆ ಪರಿಣಾಮ ಬೀರುವುದಿಲ್ಲ ..

ಕಾಂಗ್ರೆಸ್ ಅನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಇಡಿ ಅಧಿಕಾರಿಗಳಿಗೆ ಗೊತ್ತಿದೆ..

ಬೆಂಬಲ ನೀಡಿದ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ ರಾಹುಲ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅವರ ಪಾತ್ರದ ಕುರಿತು ಇತ್ತೀಚೆಗೆ ಐದು ದಿನಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯವು ತನ್ನ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಬುಧವಾರ ಹೇಳಿದ್ದಾರೆ.

ಇಡಿ (ED) ಮತ್ತು ಅಂತಹ ಸಂಸ್ಥೆಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ, ನನ್ನನ್ನು ವಿಚಾರಣೆ ನಡೆಸಿದ ಅಧಿಕಾರಿಗಳು ಸಹ ಕಾಂಗ್ರೆಸ್ ಪಕ್ಷದ ನಾಯಕನನ್ನು ಹೆದರಿಸಲು ಮತ್ತು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಅರ್ಥಮಾಡಿಕೊಂಡರು ಎಂದು ಬುಧವಾರ ಮಧ್ಯಾಹ್ನ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ನಡೆಸಿದ ಸಂವಾದದಲ್ಲಿ ರಾಹುಲ್ ಹೇಳಿದ್ದಾರೆ.

ಇಡಿ ವಿಚಾರಣೆ ವೇಳೆ ಬೆಂಬಲ ನೀಡಿದ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ ರಾಹುಲ್, ನಾನು ಒಬ್ಬಂಟಿ ಅಲ್ಲ, ನಾವೆಲ್ಲರೂ ಪ್ರಜಾಪ್ರಭುತ್ವಕ್ಕಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಟೀಕಿಸಿ ಕಾಂಗ್ರೆಸ್ ನಾಯಕ ನಾವು ಸೇನಾಪಡೆಗಳನ್ನು ಬಲಪಡಿಸಬೇಕಿದೆ ಆದರೆ ಸರ್ಕಾರ ಅದನ್ನು ದುರ್ಬಲವನ್ನಾಗಿ ಮಾಡುತ್ತಿದೆ.ಯುದ್ಧದ ವೇಳೆ ಇದರ ಪರಿಣಾಮ ಗೊತ್ತಾಗುತ್ತದೆ ಎಂದು ಅವರು ಹೇಳಿದ್ದಾರೆ.

ಮಲ್ಪೆ: ಶಾಸಕ ರಘುಪತಿ ಭಟ್ ರಿಂದ ಪರಿಶಿಷ್ಟ ಜಾತಿ ಮೀನುಗಾರರಿಗೆ ದೋಣಿ ಹಾಗೂ ಸಲಕರಣೆ ವಿತರಣೆ – Vishwanews24

 

Leave a Reply