ಕಾಂಗ್ರೆಸ್ ಪಕ್ಷದ ವಿರುದ್ಧ ಅಸಮಾಧಾನ ಹೊರ ಹಾಕಿದ ರಾಮಲಿಂಗಾರೆಡ್ಡಿ -Vishwanews24
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನಿಂದ ಕಂಗೆಟ್ಟಿರುವಾಗಲೇ ಪಕ್ಷದ ಹಿರಿಯ ನಾಯಕರು ತಿರುಗಿ ಬಿದ್ದಿದ್ದಾರೆ.
ಪಕ್ಷದ ನಾಯಕರಾದ ರಾಮಲಿಂಗಾರೆಡ್ಡಿ ಅಸಮಾಧಾನ ಹೊರ ಹಾಕಿದ್ದಾರೆ. ಕಾಂಗ್ರೆಸ್ ಪಕ್ಷದ ಈ ಸ್ಥಿತಿಗೆ ಹೊಸಬರು, ವಲಸಿಗರು ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಸಿದ್ದರಾಮಯ್ಯ ಮತ್ತು ಟೀಂನ್ನೇ ಟಾರ್ಗೆಟ್ ಮಾಡಿ ಟ್ವೀಟ್ ಮಾಡಿರುವ ರಾಮಲಿಂಗಾ ರೆಡ್ಡಿ, ಕಾಂಗ್ರೆಸ್ ಪಕ್ಷದ ಬಗ್ಗೆ ಅರಿವಿಲ್ಲದ ಹೊಸಬರು, ವಲಸಿಗರಿಗೆ ಮಣೆ ಹಾಕಿದ್ದೇ ಕಾರಣವಾಗಿದೆ. ಪಕ್ಷದ ಆಂತರಿಕ ಸಮಸ್ಯೆಗಳನ್ನು ಬಗೆಹರಿಸಲು ಮುಂಚೂಣಿ ನಾಯಕರೇ ಕಾರಣರಾಗಿದ್ದಾರೆ. ಅಲ್ಲದೆ ಹಿರಿಯರ ಕಡೆಗಣನೆ, ಕಾಂಗ್ರೆಸ್ ಸಚಿವರ ಸಂಘಟನಾ ಕೊರೆತೆ ಸೋಲಿಗೆ ಕಾರಣವಾಗಿದೆ. ಕಾಂಗ್ರೆಸ್ ಸಚಿವರು, ಕಾರ್ಯಕರ್ತರ ನಡುವೆ ಸಮನ್ವಯತೆಯೇ ಇಲ್ಲವಾಗಿದೆ ಎಂದು ಆರೋಪಿಸಿದ್ದಾರೆ.
ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯರ ಕಡೆಗಣನೆ ಹಾಗೂ ಕೆಲವು ಕಾಂಗ್ರೆಸ್ ಸಚಿವರ ಸಂಘಟನೆ, ದೂರದೃಷ್ಟಿತ್ವ ಕೊರತೆಯಿಂದಾಗಿ ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಬೇಕಾಯಿತು.
ಹಿರಿಯರ ಸಲಹೆ ಪರಿಗಣಿಸದಿರುವುದು, ಕೆಲವು ಸಚಿವರ ಕಾರ್ಯಕ್ಷಮತೆ ಕೂಡ ಪಕ್ಷಕ್ಕೆ ಹಿನ್ನಡೆಯಾಗಲು ಮುಖ್ಯ ಕಾರಣವೆಂದು ಹೇಳಿದ್ದಾರೆ. ಪಕ್ಷದ ಹಿತಕ್ಕಾಗಿ ಹಿರಿಯರು ಸಮಾಲೋಚನೆ ನಡೆಸಬೇಕಿದೆ. ಯಾರೂ ಪಕ್ಷ ಬಿಡದಂತೆ ಎಚ್ಚರಿಕೆ ವಹಿಸಬೇಕಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯರ ಕಡೆಗಣನೆ ಹಾಗೂ ಕೆಲವು ಕಾಂಗ್ರೆಸ್ ಸಚಿವರ ಸಂಘಟನಾ ದೂರದೃಷ್ಟಿತ್ವ ಕೊರತೆಯಿಂದಾಗಿ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಬೇಕಾಯಿತು. ಹಿರಿಯರು ನೀಡಿದ ಸಲಹೆಗಳನ್ನು ಪರಿಗಣಿಸದೇ ಇರುವುದು, ಕೆಲವು ಸಚಿವರ ಕಾರ್ಯಕ್ಷಮತೆಯೂ ಸಹ ಪಕ್ಷಕ್ಕೆ ಹಿನ್ನಡೆಯಾಗಲು ಪ್ರಮುಖ ಕಾರಣವಾಯಿತು
1/6— Ramalinga Reddy (@RLR_BTM) June 4, 2019
