ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಬಿಜೆಪಿ ಸೇರ್ಪಡೆ – Vishwanews24
ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಬಿಜೆಪಿ ಸೇರ್ಪಡೆ
ಬೆಂಗಳೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರ ಪುತ್ರಿ ರಾಜನಂದಿನಿ ಬುಧವಾರ ಬಿಜೆಪಿ ಪಕ್ಷ ಸೇರ್ಪಡೆಯಾದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.
#WATCH | Dr Rajanandini, daughter of veteran Congress leader & former Speaker Kagodu Thimmappa, joins BJP in the presence of BJP leader and former Karnataka CM BS Yediyurappa#KarnatakaAssemblyElections2023 pic.twitter.com/9iaxIIZmeL
— ANI (@ANI) April 12, 2023
ಪಕ್ಷ ಸೇರ್ಪಡೆಗೂ ಮುನ್ನ ಯಡಿಯೂರಪ್ಪ ಅವರ ಕಾವೇರಿ ನಿವಾಸದಲ್ಲಿ ಭೇಟಿಯಾಗಿದ್ದ ರಾಜನಂದಿನಿ ಕೆಲಕಾಲ ಮಾತುಕತೆ ನಡೆಸಿದ್ದರು.
ರಾಜನಂದಿನಿಗೆ ಕಾಂಗ್ರೆಸ್ ಟಿಕೆಟ್ ವಂಚಿಸಿತ್ತು. ಇಷ್ಟೇ ಅಲ್ಲ ಕಾಗೋಡು ತಿಮ್ಮಪ್ಪ ಅವರಿಗೂ ಟಿಕೆಟ್ ನಿರಾಕರಿಸಲಾಗಿತ್ತು. ಸಾಗರದಿಂದ ಕಾಗೋಡು ತಿಮ್ಮಪ್ಪ ಮತ್ತೆ ಸ್ಪರ್ಧಿಸಲು ಸಜ್ಜಾಗಿದ್ದರು. ವಯಸ್ಸಿನ ಕಾರಣದಿಂದ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದರೆ ಪುತ್ರಿಗೆ ಟಿಕೆಟ್ ಕೊಡಿಸಲು ಮುಂದಾಗಿದ್ದರು. ಆದರೆ ಕಾಂಗ್ರೆಸ್ ಕಾಗೋಡು ತಿಮ್ಮಪ್ಪ, ಪುತ್ರಿ ರಾಜನಂದಿನಿ ಬದಲು ಬೇಳೂರು ಗೋಪಾಲಕೃಷ್ಣಗೆ ಟಿಕೆಟ್ ನೀಡಿದ್ದರು.
ಇದರಿಂದ ಕಾಗೋಡು ಹಾಗೂ ರಾಜನಂದಿನಿ ತೀವ್ರ ಅಸಮಾಧಾನಗೊಂಡಿದ್ದರು. ಇದೀಗ ಕಾಂಗ್ರೆಸ್ ತಮ್ಮನ್ನು ಕಡೆಗಣಿಸುತ್ತಿದೆ ಅನ್ನೋ ಅಸಮಾಧಾನವನ್ನು ರಾಜನಂದಿನಿ ಹೊರಹಾಕಿದ್ದಾರೆ.
