ಕಾಪು : ಗೃಹಿಣಿಯ ಕತ್ತಿನಿಂದ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಸರಗಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು -Vishwanews24
ಕಾಪು: ಇಲ್ಲಿನ ಕಾಪು ಪಾದೂರು ಗ್ರಾಮದ ಹೊಸಬೆಟ್ಟು ಬಸದಿಯ ಬಳಿ ಮನೆಯ ತೋಟದಲ್ಲಿ ತರಕಾರಿ ಕೊಯ್ಯುತ್ತಿದ್ದ ಗೃಹಿಣಿಯ ಕತ್ತಿನಿಂದ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಸರಗಳ್ಳನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕು ಉಂಚಳ್ಳಿ ಗ್ರಾಮದ ಬನವಾಸಿ ನಿವಾಸಿ ಅರವಿಂದ ನಾರಾಯಣ ನಾಯ್ಕ (34) ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ ಮಾಂಗಲ್ಯ ಸರ ಸಹಿತ 1,46,200 ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಪಾದೂರು ಜೈನ ಬಸದಿ ನಿವಾಸಿ ಗೀತಾ ಸುಜನ್ ಕುಮಾರ್ ಅವರು ಮನೆಯ ತೋಟದಲ್ಲಿ ಅ. 11ರಂದು ತರಕಾರಿ ಕೊಯ್ಯುತ್ತಿದ್ದಾಗ ಅಪರಿಚಿತ ವ್ಯಕ್ತಿಯೋರ್ವ ಬಂದು ಕುತ್ತಿಗೆಗೆ ಬಟ್ಟೆ ಬಿಗಿದು ಕುತ್ತಿಗೆಯಲ್ಲಿದ್ದ ಮೂರು ಪವನ್ ತೂಕದ ಮಾಂಗಲ್ಯ ಸರವನ್ನು ಕಿತ್ತು ಪರಾರಿಯಾಗಿದ್ದ. ಗೀತಾ ಅವರು ವಿರೋಧಿಸಿದ್ದ ವೇಳೆ ಅವರ ಕುತ್ತಿಗೆ, ಕೈಗೆ ಮತ್ತು ಮೂಗಿನ ಕೆಳಗಡೆ ಗಾಯವಾಗಿತ್ತು. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕಾಪು ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್ ಅವರು ತನಿಖೆ ಮುಂದುವರಿಸಿದ್ದರು.
ಸರವನ್ನು ಬಲತ್ಕಾರವಾಗಿ ಎಳೆಯುವಾಗ ಗೀತಾರವರು ಅಡ್ಡಿಪಡಿಸಿದ್ದರಿಂದ ಕುತ್ತಿಗೆಯ ಬಳಿ ಹಾಗೂ ಕೈಗೆ ಮತ್ತು ಮೂಗಿನ ಕೆಳಗಡೆ ಗಾಯವಾಗಿದೆ. ಈ ಘಟನೆಯ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಕಾರ್ಯ ಪ್ರವೃತರಾದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
