ಕಾಪು ಜೇಸಿಐ ನಿಕಟಪೂರ್ವಾಧ್ಯಕ್ಷೆ ಸುಖಲಾಕ್ಷಿ ಬಂಗೇರ ಅವರಿಗೆ ಸಾಧನಾಶ್ರೀ ಪುರಸ್ಕಾರ – vishwanews24
ಕಾಪು ಜೇಸಿಐ ನಿಕಟಪೂರ್ವಾಧ್ಯಕ್ಷೆ ಸುಖಲಾಕ್ಷಿ ಬಂಗೇರ ಅವರಿಗೆ ಸಾಧನಾಶ್ರೀ ಪುರಸ್ಕಾರ
ಕಾಪು : ಜೇಸಿಐ ಮಡಂತ್ಯಾರು ಘಟಕದ ಆಶ್ರಯದಲ್ಲಿ ರವಿವಾರ ನಡೆದ ವಲಯ 15ರ “ಮೃದಂಗ” ವ್ಯವಹಾರ ಸಮ್ಮೇಳನದಲ್ಲಿ ಕಾಪು ಜೆಸಿಐನ ನಿಕಟ ಪೂರ್ವ ಅಧ್ಯಕ್ಷ ಸುಖಲಾಕ್ಷಿ ಬಂಗೇರ ಅವರನ್ನು ಜೇಸಿಐ ಸಾಧನಾಶ್ರೀ ಪುರಸ್ಕಾರದೊಂದಿಗೆ ಗೌರವಿಸಲಾಯಿತು
ಜೇಸಿಐ ವಲಯ 15ರ ವಲಯಾಧ್ಯಕ್ಷ ಅಭಿಲಾಶ್ ಬಿ.ಎ. , ವ್ಯವಹಾರ ವಿಭಾಗದ ವಲಯ ನಿರ್ದೇಶಕ ಅಶೋಕ್ ಗುಂಡ್ಯಲ್ಕೆ, ವಲಯ ಉಪಾಧ್ಯಕ್ಷ ಪ್ರಶಾಂತ್ ಆಚಾರ್ಯ ನೇತೃತ್ವದಲ್ಲಿ ಸಾಧನಾಶ್ರೀ ಪ್ರಶಸ್ತಿ ಪ್ರಧಾನಿಸಲಾಯಿತು
ಪೂರ್ವ ವಲಯಾಧ್ಯಕ್ಷರಾದ ರಾಕೇಶ್ ಕುಂಜೂರು, ಪುರುಷೋತ್ತಮ ಶೆಟ್ಟಿ, ಪೂರ್ವ ವಲಯ ಉಪಾಧ್ಯಕ್ಷ ಸೌಮ್ಯ ರಾಕೇಶ್, ಜೇಸಿಐ ಕಾಪುವಿನ ಅಧ್ಯಕ್ಷ ಅನಿತಾ ಹೆಗ್ಡೆ, ಪೂರ್ವಾಧ್ಯಕ್ಷರಾದ ಜಗದೀಶ್ ಬಂಗೇರ, ಸುಜಿತ್ ಶೆಟ್ಟಿ ಕಾರ್ಯದರ್ಶಿ ಶ್ರುತಿ ಶೆಟ್ಟಿ, ಜೇಸಿಐ ಮಡಂತ್ಯಾರು ಅಧ್ಯಕ್ಷೆ ಅಮಿತಾ ಅಶೋಕ್ ಮೊದಲಾದವರು ಉಪಸ್ಥಿತರಿದ್ದರು.
