ಕಾಪು ತಾಲೂಕು ಆಡಳಿತ ಸೌಧದಲ್ಲಿ ನಿಲುಗಡೆಯಾಗದ ಖಾಸಗಿ ಬಸ್ ಗಳು : ಸ್ಟಾಪ್ ಕೊಡಿಸಲು  ಖುದ್ದು ಬಸ್ ನಲ್ಲಿ ಆಗಮಿಸಿದ ತಹಶೀಲ್ದಾರ್ ಪ್ರತಿಭಾ – Vishwanews24

Featured, ಉಡುಪಿ

ಕಾಪು ನೂತನ ಆಡಳಿತಸೌಧದ ಬಳಿ ಸ್ಟಾಪ್ ನೀಡದೆ  ಸಂಚರಿಸುತ್ತಿದ್ದ ಖಾಸಗಿ ಬಸ್ ಗಳು

ಆರ್‌ಟಿಒ ಸೂಚನೆಗೆ ನೋ ಕೇರ್: ಸಾರ್ವಜನಿಕರಿಗೆ ತೊಂದರೆ

ಆಡಳಿತಸೌಧದ ಬಳಿ ಸ್ಟಾಪ್ ಕೊಡಿಸಲು ಖುದ್ದು ಬಸ್ ನಲ್ಲಿ ಆಗಮಿಸಿದ ಕಾಪು ತಹಸೀಲ್ದಾರ್ ಪ್ರತಿಭಾ 

ತಹಸೀಲ್ದಾರ್  ಹಲವು ಬಾರಿ ಕೇಳಿಕೊಂಡ ಬಳಿಕ ಸ್ಟಾಪ್ ನೀಡಿದ ಬಸ್‌ ನಿರ್ವಾಹಕ 

ಕಾಪು ಬಂಗ್ಲೆ ಮೈದಾನ ಬಳಿಯಿರುವ ನೂತನ ಆಡಳಿತಸೌಧಕ್ಕೆ ಬರುವ ಜನರಿಗೆ ಅನುಕೂಲವಾಗುವಂತೆ ಎಲ್ಲ ಬಸ್‌ಗಳನ್ನು ಅಲ್ಲಿ ನಿಲುಗಡೆ ಮಾಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ, ಬಸ್ ಮಾಲೀಕರ ಸಂಘಗಳಿಗೆ ಸೂಚನೆ ನೀಡಿದ್ದರೂ ಬಸ್‌ಗಳನ್ನು ನಿಲುಗಡೆ ಮಾಡದೆ ಸಂಚರಿಸುತ್ತಿದ್ದ ಪರಿಣಾಮ ಆಗುವ ತೊಂದರೆ ಮನಗಂಡ ಕಾಪು ತಹಸೀಲ್ದಾರ್ ಪ್ರತಿಭಾ ಆರ್. ಶುಕ್ರವಾರ ಖುದ್ದು ಬಸ್‌ನಲ್ಲಿ ಆಗಮಿಸಿ ಆಡಳಿತ ಸೌಧ ಮುಂಬಾಗ ಬಸ್ ನಿಲುಗಡೆ ಪಡೆದು ಕಚೇರಿ ತಲುಪಿದರು.

ಆರ್‌ಟಿಒ ಸೂಚನೆಗೆ ನೋ ಕೇರ್: ಸಾರ್ವಜನಿಕರಿಗೆ ತೊಂದರೆ
ಕಾಪು ನೂತನ ಆಡಳಿತ ಸೌಧದಲ್ಲಿ ಶಾಸಕರ ಕಚೇರಿ, ತಾಲೂಕು ಕಚೇರಿ, ತಾಲೂಕು ಪಂಚಾಯಿತಿ ಕಚೇರಿ, ಉಪಖಜಾನಾಧಿಕಾರಿಗಳ ಕಚೇರಿ, ಆಹಾರ ಶಾಖೆ ಮತ್ತು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಕಾರ್ಯ ನಿರ್ವಹಿಸುತ್ತಿದೆ. ಕಚೇರಿ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಸ್ ನಿಲುಗಡೆಗೆ ನಿರ್ದೇಶನ ನೀಡುವಂತೆ ಕಾಪು ತಹಸೀಲ್ದಾರ್ ಜಿಲ್ಲಾ ಪ್ರಾದೇಶಿಕ ಸಾರಿಗೆ ಇಲಾಖೆಗೆ ಕೋರಿದ್ದರು. ಅದರಂತೆ ಸಾರಿಗೆ ಅಧಿಕಾರಿ ಬಸ್ ನಿಲುಗಡೆ ಮಾಡುವಂತೆ ಅವಿಭಜಿತ ದಕ್ಷಿಣಕನ್ನಡ ಜಿಲ್ಲಾ ಕೆನರಾ ಬಸ್ ಮಾಲೀಕರ ಸಂಘ, ಕರಾವಳಿ ಬಸ್ ಮಾಲೀಕರ ಸಂಘ ಹಾಗೂ ಶಿರ್ವ ಬಸ್ ಮಾಲೀಕರ ಸಂಘಕ್ಕೆ 2023 ನವೆಂಬರ್ 3ರಂದು ಸೂಚನೆ ನೀಡಿದ್ದರು. ಆದರೆ ಆ ಬಳಿಕ ಯಾವೊಂದು ಬಸ್‌ಗಳು ನಿಲುಗಡೆ ಮಾಡದೆ ಕಚೇರಿ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ತಹಸೀಲ್ದಾರ್ ಗಮನಕ್ಕೆ ತರಲಾಗಿತ್ತು.

6 ವರ್ಷ ಮೇಲ್ಪಟ್ಟ ಮಕ್ಕಳನ್ನು ಬೈಕ್‌ನಲ್ಲಿ ಕರೆದೊಯ್ಯುವಾಗ ಹೆಲ್ಮೆಟ್ ಕಡ್ಡಾಯ – Vishwanews24

ತಹಸೀಲ್ದಾರ್ ಹಲವಾರು ಬಾರಿ ಕೇಳಿಕೊಂಡ ಬಳಿಕ ಸ್ಟಾಪ್ ನೀಡಿದರು
ಪ್ರತಿನಿತ್ಯ ಬಸ್‌ನಲ್ಲಿ ಬರುವ ಕಚೇರಿ ಸಿಬ್ಬಂದಿ ಹಾಗೂ ಸಾರ್ವಜನಿಕರು ಬಸ್‌ಗಳವರೊಡನೆ ವಾಗ್ವಾದ ನಡೆಸುವ ಪರಿಸ್ಥಿತಿ ಇತ್ತು. ಇದನ್ನು ತಿಳಿದ ತಹಸೀಲ್ದಾರ್ ಶುಕ್ರವಾರ ಉಡುಪಿಯಿಂದ ಖುದ್ದಾಗಿ ಕಾಪುವಿಗೆ ಬಸ್‌ನಲ್ಲಿ ಆಗಮಿಸಿದ್ದರು. ತಹಸೀಲ್ದಾರ್ ನಿರ್ವಾಹಕರಲ್ಲಿ ಹಲವು ಬಾರಿ ಕೇಳಿಕೊಂಡ ಬಳಿಕ ಆಡಳಿತ ಸೌಧ ಮುಂಭಾಗ ನಿಲುಗಡೆ ನೀಡಿದ್ದಾರೆ. ಪ್ರಯಾಣಿಕರಿಗೆ ಅನುಕೂಲಕ್ಕಾಗಿ ಬಸ್‌ಗಳನ್ನುನಿಲುಗಡೆ ಮಾಡುವಂತೆ ಸಾರಿಗೆ ಅಧಿಕಾರಿ ಕಟ್ಟು ನಿಟ್ಟಿನ ಕ್ರಮವಹಿಸಬೇಕು ಎಂದು ತಹಸೀಲ್ದಾರ್ ಸೂಚಿಸಿದ್ದಾರೆ.

ಮಂಗಳೂರು: ಸುಳ್ಳು ಪ್ರಚಾರ ಹಾಗೂ ಮೋದಿಯವರ ಬಗ್ಗೆ ಜನರಲ್ಲಿ ಕಲ್ಪಿತ ಭ್ರಮೆಗಳನ್ನು ಸೃಷ್ಟಿಸಿಬೇಡಿ : ನಿರ್ಮಲಾ ಸೀತಾರಾಮನ್ ಗೆ ದಿನೇಶ್ ಗುಂಡೂರಾವ್ – Vishwanews24

Leave a Reply