ಕಾಪು: ಪಾಂಗಾಳ ಒಂದೇ ಮನೆಯ ಕೊಟ್ಟಿಗೆಯಲ್ಲಿ ಮೂರು ಹೆಬ್ಬಾವು ಪತ್ತೆ -Vishwanews24

ಉಡುಪಿ

ಕಾಪು: ಪಾಂಗಾಳ ಒಂದೇ ಮನೆಯ ಕೊಟ್ಟಿಗೆಯಲ್ಲಿ ಮೂರು ಹೆಬ್ಬಾವು ಪತ್ತೆ -Vishwanews24

ಕಾಪು: ಪಾಂಗಾಳದ ಒಂದೇ ಮನೆಯ ಕೊಟ್ಟಿಗೆಯಲ್ಲಿ ಅವಿತುಕೊಂಡಿದ್ದ ಮೂರು ಹೆಬ್ಬಾವುಗಳನ್ನು ಶಿವಾನಂದ ಪೂಜಾರಿ (ಮುನ್ನಾ ಕಾಪು) ನೇತೃತ್ವದ ತಂಡ ಗುರುವಾರ ಸಂಜೆ ಸೆರೆ ಹಿಡಿದು, ರಕ್ಷಿಸಿರುವ ಘಟನೆ ಗುರುವಾರ ನಡೆದಿದೆ.

ಪಾಂಗಾಳ ಗುಡ್ಡೆ ನಿವಾಸಿ ಆಲ್ವಿನ್ ಪ್ರಕಾಶ್ ಎಂಬವರ ಮನೆಯ ದನದ ಹಟ್ಟಿಯಲ್ಲಿ ಹೆಬ್ಬಾವು ಇರುವುದನ್ನು ಗಮನಿಸಿದ ಮನೆಯವರು ಈ ಬಗ್ಗೆ ಹಾವು ಹಿಡಿಯುವುದರಲ್ಲಿ ನಿಸ್ಸೀಮರಾಗಿರುವ ಶಿವಾನಂದ್ ಕಾಪು ಅವರಿಗೆ ಮಾಹಿತಿ ನೀಡಿದ್ದರು.‌

ಆ ಕೂಡಲೇ ‌ಸ್ಥಳಕ್ಕಾಗಮಿಸಿ ಹೆಬ್ಬಾವುಗಳನ್ನು ಹಿಡಿದು ರಕ್ಷಿಸಿ ಅರಣ್ಯ ಇಲಾಖೆಯ ಸುಪರ್ದಿಗೆ ಒಪ್ಪಿಸಲಾಯಿತು.ಈ ಸಂಧರ್ಭದಲ್ಲಿ ರವಿ ಬಿಂದಾಸ್,ಮಾದವ ಪೂಜಾರಿ,ಉಮೇಶ್ ಮೊದಲಾದವರು ಸಹಕರಿಸಿದರು.