ಕಾಪು ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಸದನದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24
ಕಾಪು ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಸದನದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ
ಬೆಳಗಾವಿ/ಕಾಪು: ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆ ಮುಂಚೂಣಿಯಲ್ಲಿದ್ದು, 1 ಜಿಲ್ಲೆ 1 ತಾಣ ಅಭಿವೃದ್ಧಿಯಡಿ ಕಾಪು ಕ್ಷೇತ್ರದ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರಕಾರ ಅನುದಾನ ಒದಗಿಸಬೇಕು ಎಂದು ಶಾಸಕ ಗುರ್ಮೆ ಶೆಟ್ಟಿ ಬೆಳಗಾವಿ ಸುವರ್ಣ ಸೌಧ’ದಲ್ಲಿ ನಡೆಯುತ್ತಿರುವ ಅಧಿವೇಶನದ ಸಂದರ್ಭ ಸದನದಲ್ಲಿ ಸರಕಾರಕ್ಕೆ ಮನವಿ ಮಾಡಿದ್ದಾರೆ.
ರಾಯಚೂರು: ಸಾರಿಗೆ ಬಸ್ ಪಲ್ಟಿ : ಕಂಡಕ್ಟರ್ ಸಾವು , 20 ಪ್ರಯಾಣಿಕರಿಗೆ ಗಾಯ – vishwanews24
ಕರ್ನಾಟಕ ವಿಧಾನಸಭೆ ಅಧಿವೇಶನದ ಚುಕ್ಕೆ ಗುರುತಿನ ಸಂಖ್ಯೆ 380 ರಡಿ ಈ ಕುರಿತು ರಾಜ್ಯ ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನಾ ಶಾಸ್ತ್ರ ಇಲಾಖೆಯ ಸಚಿವ ಹೆಚ್.ಕೆ.ಪಾಟೀಲ್ ಅವರಿಗೆ ಮನವಿ ಮಾಡುತ್ತಾ ನಾನು ಸತತ 3 ನೇ ಬಾರಿಗೆ ತಮ್ಮಲ್ಲಿ ಮನವಿ ಮಾಡುತ್ತಿದ್ದೇನೆ. ಕಾಪು ಕ್ಷೇತ್ರದಲ್ಲಿ ಮಾರಿಗುಡಿ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ ಮತ್ತು ಅಂತರಾಷ್ಟ್ರೀಯ ಮನ್ನಣೆ ಪಡೆದ ಲೈಟ್ ಹೌಸ್, ಬ್ಲೂ ಫ್ಲಾಗ್ ಬೀಚ್ ಸಹಿತ ಹಲವಾರು ಧಾರ್ಮಿಕ ಮತ್ತು ಪ್ರವಾಸೋದ್ಯಮ ಸ್ಥಳಗಳಿವೆ. ಇಲ್ಲಿಗೆ ಪ್ರತಿನಿತ್ಯ ಸಾವಿರಾರು ಮಂದಿ ಪ್ರವಾಸಿಗರು ಬರುತ್ತಿದ್ದಾರೆ. 1 ಜಿಲ್ಲೆ 1 ತಾಣ ಯೋಜನೆಯಡಿ ಕಾಪು ಕ್ಷೇತ್ರವನ್ನು ನಿಗದಿಗೊಳಿಸಿ, ಪ್ರವಾಸಿ ತಾಣದ ಅಭಿವೃದ್ಧಿಗೆ 5 ಕೋಟಿ ಹಣ ಬಿಡುಗಡೆ ಮಾಡುವುದಾಗಿ ಪ್ರಥಮ ಅಧಿವೇಶನದಲ್ಲೇ ಭರವಸೆ ನೀಡಿದ್ದೀರಿ. ಇದುವರೆಗೂ ಹಣ ಬಿಡುಗಡೆ ಆಗಿಲ್ಲ. ಹಣ ಬಿಡುಗಡೆ ಮಾಡಿದರೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಅನುಕೂಲವಾಗುತ್ತದೆ. ಈ ಕುರಿತು ಕೇಂದ್ರ ಸರಕಾರಕ್ಕೂ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
