ಕಾಪು: ಪ್ರಾದೇಶಿಕ ಭಾಷೆಗಳಿಗೆ ಒತ್ತು ನೀಡದ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಕೂಗಿ ಪ್ರತಿಭಟಿಸಿದ ಕಾಪು ಜೆಡಿಎಸ್ : vishwanews24

Featured, ಉಡುಪಿ

ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ನೇತ್ರತ್ವದಲ್ಲಿ ಹಿಂದಿ ದಿವಸ್ ಆಚರಣೆ ವಿರೋಧಿಸಿ ಕಾಪು ಪೇಟೆಯಲ್ಲಿ ಪ್ರತಿಭಟನೆ

ಕಾಪು: ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ನೇತ್ರತ್ವದಲ್ಲಿ ಹಿಂದಿ ದಿವಸ್ ಆಚರಣೆ ವಿರೋಧಿಸಿ ಕಾಪು ಪೇಟೆಯಲ್ಲಿ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಕಪ್ಪ ಎ ಮಾತನಾಡಿ ವೈವಿದ್ಯಮಯವಾದ ಸಂಸ್ಕೃತಿ ಭಾಷೆ ಮತ್ತು ಸಂಸ್ಕಾರವನ್ನು ಹೊಂದಿರುವ ಭಾರತದಲ್ಲಿ ಹಿ0ದಿ ಭಾಷೆಗೆ ಮಾತ್ರ ಪ್ರಾಮುಖ್ಯತೆ ಕೊಡುವ ಕೇಂದ್ರ ಸರಕಾರದ ನಿರ್ಧಾರ ಖಂಡನೀಯವಾಗಿದೆ.ಈ ಬಗ್ಗೆ ಜನರೆಲ್ಲರೂ ಜಾಗೃತರಾಗಬೇಕಿದೆ ಎಂದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ಮಾತನಾಡಿ ರಾಜ್ಯದಲ್ಲಿ ಪ್ರಾದೇಶಿಕತೆಗೆ ಹೆಚ್ಚಿನ ಒತ್ತು ನೀಡಬೇಕಿದ್ದು,ಇಂತಹ ಸಂದರ್ಭದಲ್ಲಿ ಹಿಂದಿ ಭಾಷೆಗೆ ಪ್ರಾಮುಖ್ಯತೆ ನೀಡುತ್ತಿರುವುದು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರದ ಭಾಷಾ ವಿರೋಧಿ ಕೃತ್ಯವಾಗಿದೆ .ಆಯಾ ರಾಜ್ಯ ಜಿಲ್ಲೆ ಮತ್ತು ಸ್ಥಳೀಯ ಪ್ರದೇಶಗಳ ಭಾಷೆಗಳಿಗೆ ಒತ್ತು ನೀಡಿದ್ದಲ್ಲಿ ರಾಜ್ಯಕ್ಕೂ ದೇಶಕ್ಕೂ ಒಳಿತಾಗುತ್ತದೆ. ಹಿಂದೀ ಭಾಷೆಯನ್ನು ಹೇರುವ ಮೂಲಕ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯನ್ನು ಉಂಟು ಮಾಡಲಾಗುತ್ತಿದೆ.

ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ…ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಇದರ ವಿರುದ್ಧ ಸಂಘಟಿತ ಹೋರಾಟ ನಡೆಯಬೇಕಿದೆ ಎಂದು ಅವರು ಹೇಳಿದರು.

ಪ್ರತಿಭಟನೆಯಲ್ಲಿ ಪುರಸಭಾ ಸದಸ್ಯ ಉಮೇಶ್ ಪೂಜಾರಿ ಮಲ್ಲಾರ್, ಭರತ್ ಶೆಟ್ಟಿ, ಜಯರಾಮ ಆಚಾರ್ಯ, ಸುಧಾಕರ ಶೆಟ್ಟಿ ಹೆಜಮಾಡಿ,ಇಕ್ಬಾಲ್ ಆತ್ರಾಡಿ, ವೆಂಕಟೇಶ ಪಡುಬಿದ್ರಿ, ಇಸ್ಮಾಯಿಲ್ ಕರ್ನಿರೆ ,ಹುಸೇನ್ ಹೈಕಾಡಿ,ಮೊದಲಾದವರು ಉಪಸ್ಥಿತರಿದ್ದರು.

ದ.ಕ.ದಲ್ಲಿ ಸೆ. 26ರಿಂದ ಅ.10ರ ವರೆಗೆ ದಸರಾ ರಜೆ – ಉಡುಪಿಯಲ್ಲಿ ಅ.3ರಿಂದ 16ರ ವರೆಗೆ ರಜೆ – Vishwanews24

Leave a Reply