ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾಗಿ ಜಿತೇಂದ್ರ ಶೆಟ್ಟಿ ಅಧಿಕಾರ ಸ್ವೀಕಾರ – Vishwanews24

Featured, ಉಡುಪಿ

ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾಗಿ ಜಿತೇಂದ್ರ ಶೆಟ್ಟಿ ಅಧಿಕಾರ ಸ್ವೀಕಾರ

ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಇದರ ಅಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ನಿಕಟಪೂರ್ವ ಮಂಡಲ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಅವರು ನೂತನ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ ಅವರಿಗೆ ಪಕ್ಷದ ಬಾವುಟ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಮಂಗಳೂರು: ವಕೀಲ ರಾಜೇಶ್ ಪ್ರಕರಣ ; ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆ – Vishwanews24

ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ನಾನು ಆಕಾಂಕ್ಷಿಯಲ್ಲ , ಆರ್ಥಿಕವಾಗಿ, ದೈಹಿಕವಾಗಿ, ಮಾನಸಿಕವಾಗಿ ಕುಸಿದಿದ್ದೇನೆ : ಸಾರಾ ಮಹೇಶ್ – Vishwanews24

Leave a Reply