ಕಾಪು ಶ್ರೀ ಹೊಸ ಮಾರಿಗುಡಿ : ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನಗಣನೆ ಆರಂಭ – vishwanews24
ಕಾಪು ಶ್ರೀ ಹೊಸ ಮಾರಿಗುಡಿ : ಫೆ. 25ರಿಂದ ಮಾ.5ರವರೆಗೆ ಬ್ರಹ್ಮಕಲಶೋತ್ಸವ ಸಂಭ್ರಮ
ಮಹಾವೈಭವಕ್ಕೆ ಸಾಕ್ಷಿಯಾಗಲು ಸಜ್ಜಾಗುತ್ತಿದೆ ಕಾಪು ..
ಭರದಿಂದ ಸಾಗುತ್ತಿವೆ ಅಂತಿಮ ಸಿದ್ಧತೆಗಳು..
ಕಾಪು: ಸಂಪೂರ್ಣ ಇಳಕಲ್ ಕೆಂಪು ಶಿಲೆಯಲ್ಲಿ ನಿರ್ಮಾಣಗೊಂಡಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನಗಣನೆ ಆರಂಭಗೊಂಡಿದೆ.
ಫೆ. 25ರಿಂದ ಮಾರ್ಚ್ 5ರವರೆಗೆ ನಡೆಯುವ ನವ ದಿನಗಳ ವೈಭವಕ್ಕೆ ಇನ್ನು 4 ದಿನಗಳು ಬಾಕಿ ಉಳಿದಿದ್ದು, ಅಂತಿಮ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಹಿಂದೆಂದೂ ಕಾಣದ ಮಹಾವೈಭವಕ್ಕೆ ಸಾಕ್ಷಿಯಾಗಲು ಕಾಪು ಸಜ್ಜಾಗುತ್ತಿದೆ.
ರಂಜಾನ್ ಅವಧಿಯಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಸಮಯದಲ್ಲಿ ವಿನಾಯಿತಿಗೆ ಸಿಎಂ ಗೆ ಮನವಿ – vishwanews24
ಚಪ್ಪರ ಅಳವಡಿಕೆ, ದೇವಸ್ಥಾನದ ಸುತ್ತಮುತ್ತ ಮತ್ತು ನಗರ ಸುಂದರೀಕರಣದಂತಹ ಕಾರ್ಯಕ್ರಮಗಳಿಗೆ ವೇಗ ನೀಡಲಾಗಿದೆ. ದೇವಸ್ಥಾನದ ಸುತ್ತಲಿನ 1 ಕಿ.ಮೀ. ವ್ಯಾಪ್ತಿಯೊಳಗೆ ಉತ್ತಮ ಪಾರ್ಕಿಂಗ್ ವ್ಯವಸ್ಥೆ , ಪ್ರತೀ ದಿನ 20ರಿಂದ 30 ಸಾವಿರದಷ್ಟು ಭಕ್ತರಿಗೆ ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ , ಪ್ರತೀ ದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲು ವ್ಯವಸ್ಥೆ , ಪ್ರತಿ ದಿನ ಮಧ್ಯಾಹ್ನ ಮತ್ತು ರಾತ್ರಿ ಅನ್ನ ಸಂತರ್ಪಣೆ, ಸಂಜೆ ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಮಾರಿಗುಡಿ ಬ್ರಹ್ಮಕಲಶೋತ್ಸವ ಸಂದರ್ಭ ಹೊರ ಜಿಲ್ಲೆ, ಹೊರ ರಾಜ್ಯ ಹಾಗೂ ಹೊರ ದೇಶಗಳಿಂದಲೂ ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿಯಿಂದ ಉದ್ಯಾ ವರದವರೆಗೆ ಹೆದ್ದಾರಿ ಅಲಂಕಾರಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ.
ದ.ಕ. ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಭ್ರಮದ ಚಾಲನೆ – vishwanews24
ಬ್ರಹ್ಮಕಲಶೋತ್ಸವವನ್ನು ಕೇವಲ ಧಾರ್ಮಿಕತೆಗೆ ಸೀಮಿತವಾಗಿರಿಸದೇ ಪ್ರವಾಸೋದ್ಯಮಕ್ಕೂ ಒತ್ತು ನೀಡಿ, ಇಲ್ಲಿಗೆ ಬರುವ ಜನರಿಗೆ ಉತ್ತಮ ಆತಿಥ್ಯ, ಸೌಕರ್ಯ ಒದಗಿಸಲು ಪ್ರಯತ್ನಿಸಲಾಗುವುದು. ಆಗಮಿಸುವ ಭಕ್ತರು, ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡುವುದರ ಜತೆಗೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗು ಪೊಲೀಸ್ ಬಂದೋಬಸ್ತ್ಗೂ ವ್ಯವಸ್ಥೆ ಮಾಡಿಕೊಡಲಾಗಿದೆ.
