ಕಾಪು : ಮಿಥುನ್ ರೈ ಹೇಳಿಕೆಗೆ ತಿರುಗೇಟು : ಸಚಿವೆ ಶೋಭಾ ಜೊತೆ ಸೆಲ್ಫಿಗೆ ಮುಗಿಬಿದ್ದ ಕಾರ್ಯಕರ್ತರು – Vishwanews24

Featured, ಉಡುಪಿ

ಶೋಭಾಕ್ಕನವರ ಜೊತೆ ಸೆಲ್ಫಿ ತೆಗೆದು ಮಿಥುನ್ ರೈ ಅವರ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದೇವೆ : ವೀಣಾ ಶೆಟ್ಟಿ

ಕಾಪು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಯವರ ಜೊತೆ ಕಾರ್ಯಕರ್ತರು ಸೆಲ್ಫಿ ತೆಗೆಯುವುದರೊಂದಿಗೆ ಮಿಥುನ್ ರೈ ಅವರ ಹೇಳಿಕೆಗೆ ತಿರುಗೇಟು ನೀಡಿದರು.

ಶೋಭಾ ಕರಂದ್ಲಾಜೆ ಜೊತೆ ಉಡುಪಿ ಕ್ಷೇತ್ರದಲ್ಲಿ ಫೋಟೋ ತೆಗೆದವರಿಗೆ 5000 ಬಹುಮಾನ ನೀಡುವುದಾಗಿ ಕಾಂಗ್ರೆಸ್ ನಾಯಕ ಮಿಥುನ್ ರೈ ಘೋಷಿಸಿದ್ದರು.

ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಸೇವಾ ಪಾಕ್ಷಿಕದ ಅಂಗವಾಗಿ ಕಾಪು ಪೇಟೆಯಲ್ಲಿ ಖಾದಿ ಮೇಳವನ್ನು ಉದ್ಘಾಟಿಸಿದ ನಂತರ ಮಹಿಳಾಮೋರ್ಚಾ, ಯುವಮೋರ್ಚಾ ಕಾರ್ಯಕರ್ತರು ಸಚಿವೆಯೊಂದಿಗೆ ಸೆಲ್ಫಿ ತೆಗೆಯಲು ಮುಗಿ ಬಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ಜನಪರ ಕೆಲಸ ಮಾಡುತ್ತಿರುವ ಸರಳ ಸಂಸದೆ, ಸಚಿವರ ಜೊತೆ ಸೆಲ್ಫಿ ತೆಗೆದರೇ ಬಹುಮಾನ ನೀಡುವುದಾಗಿ ಕಾಂಗ್ರೆಸಿನ ಮಿಥುನ್ ರೈ ಹೇಳಿದ್ದಾರೆ. ಹೀಗಾಗಿ ಶೋಭಾಕ್ಕನವರ ಜೊತೆ ಮಹಿಳಾಮೋರ್ಚಾದ ತಂಡ ಸೆಲ್ಫಿ ತೆಗೆದು ಮಿಥುನ್ ರೈ ಅವರ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದೇವೆ ಎಂದರು.

ಪಾದಯಾತ್ರೆ ಬಿಟ್ಟು ಜನರ ಬಗ್ಗೆ ಮಾತನಾಡಲು ನಮಗೆ ಬೇರೆ ದಾರಿಯಿಲ್ಲ..ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

 

Leave a Reply