ಕಾಪು: ಸ್ಕೂಟಿ ಮತ್ತು ಬೈಕ್‌ ಪರಸ್ಪರ ಡಿಕ್ಕಿ : ಸವಾರ ಸಾವು – vishwanews24

Featured, ಉಡುಪಿ

ಕಾಪು: ಸ್ಕೂಟಿ ಮತ್ತು ಬೈಕ್‌ ಪರಸ್ಪರ ಡಿಕ್ಕಿ : ಸವಾರ ಸಾವು

ಕಾಪು: ಸ್ಕೂಟಿ ಮತ್ತು ಬೈಕ್‌ ಪರಸ್ಪರ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬೈಕ್‌ ಸವಾರ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಕಾಪುವಿನಲ್ಲಿ ನಡೆದಿದೆ.

ಬೈಕ್‌ ಸವಾರ ಅದಮಾರು ಕಾಲೇಜ್ ಬಳಿಯ ನಿವಾಸಿ ಸೂರಜ್ (23) ಮೃತಪಟ್ಟು ಸಹಸವಾರ ಅಧೀಶ್ ಮತ್ತು ಸ್ಕೂಟಿ ಸವಾರ ಕೊಪ್ಪಲಂಗಡಿ ನಿವಾಸಿ ಉಮೇಶ್ ಗಾಯಗೊಂಡವರು.

ಮೃತ ಸೂರಜ್ ಪಡುಬಿದ್ರಿ ಸುಜ್ಞಾನ್ ಕಂಪೆನಿಯ ಸೂಪರ್ ವೈಸರ್ ಆಗಿದ್ದು ರಾತ್ರಿ ಕಟಪಾಡಿಗೆ ತೆರಳಿ, ಅಲ್ಲಿಂದ ಅದಮಾರಿನ ತನ್ನ ಮನೆಗೆ ಆಗಮಿಸುತ್ತಿರುವಾಗ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೆ 1 ಹೊಟೇಲ್ ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ರಸ್ತೆಗೆ ಬಿದ್ದ ಸ್ಕೂಟಿ ಸವಾರ ಉಮೇಶ್ ಮತ್ತು ಬೈಕ್ ಸವಾರ ಸೂರಜ್ ಗಂಭೀರ ಗಾಯಗೊಂಡಿದ್ದು, ಸಹಸವಾರ ಆದೀಶ್ ಸಣ್ಣ ಪುಟ್ಟ ಗಾಯಗೊಂಡಿದ್ದರು. ಸ್ಥಳೀಯರು ಗಾಯಾಳುಗಳನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು, ಅಲ್ಲಿನ ವೈದ್ಯರ ಸೂಚನೆಯಂತೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಸೂರಜ್ ಅವರನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಿದ್ದು, ಮಿದುಳು ನಿಷ್ಕ್ರಿಯಗೊಂಡಿರುವುದಾಗಿ ಅಲ್ಲಿನ ವೈದ್ಯರು ತಿಳಿಸಿದ್ದು ಅದರಂತೆ ವಾಪಸ್ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಲಾಗಿತ್ತು. ಬಳಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply