ಕಾರ್ಕಳ : ಜ.22 ರಿಂದ 26 ರ ವರೆಗೆ ಅತ್ತೂರು ಜಾತ್ರೆ – Vishwanews24
ಕಾರ್ಕಳ : ಜ.22 ರಿಂದ 26 ರ ವರೆಗೆ ಅತ್ತೂರು ಜಾತ್ರೆ
ಕಾರ್ಕಳ: ತಾಲೂಕಿನಲ್ಲಿ ಪ್ರತೀ ವರ್ಷ ನಡೆಯುವ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವವು ಜ.22 ರಿಂದ 26 ರ ವರೆಗೆ ನಡೆಯಲಿದೆ.
ಈ ಬಾರಿ ಉತ್ಸವವು `ನೀವು ನನಗೆ ಸಾಕ್ಷಿಗಳಾಗುವಿರಿ’ ಎಂಬ ವಿಷಯದೊಂದಿಗೆ ನಡೆಯುತ್ತಿದ್ದು, ಒಟ್ಟು 35 ಬಲಿಪೂಜೆಗಳು ನಡೆಯಲಿವೆ. ಅದರಂತೆ
ಜ. 22ರ ಬೆಳಗ್ಗೆ 10 ಗಂಟೆಗೆ (ಕೊಂಕಣಿ) ಉಡುಪಿಯ ಧರ್ಮಾಧ್ಯಕ್ಷ ರೈ| ರೆ| ಡಾ| ಜೆರಾಲ್ಡ್ ಐಸಾಕ್ ಲೋಬೋ,
ಜ. 23ರಂದು ಬೆಳಗ್ಗೆ 10ಕ್ಕೆ (ಕನ್ನಡ) ಪುತ್ತೂರಿನ ಧರ್ಮಾಧ್ಯಕ್ಷ ರೈ ರೆ| ಡಾ| ಗೀವರ್ಗೀಸ್ ಮಾರ್ ಮಕಾರಿಯೋಸ್ ಕಲಯಿಲ್,
ಜ. 24ರಂದು ಸಂಜೆ 6ಕ್ಕೆ (ಕನ್ನಡ) ಬೆಳ್ತಂಗಡಿ ಧರ್ಮಾಧ್ಯಕ್ಷ ರೈ| ರೆ| ಡಾ| ಲಾರೆನ್ಸ್ ಮುಕ್ಕುಯಿ,
ಜ. 25ರಂದು ಬೆಳಗ್ಗೆ 10ಕ್ಕೆ (ಕೊಂಕಣಿ) ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ರೈ| ರೆ| ಡಾ| ಅಲೋಶಿಯಸ್ ಪಾವ್ಲ್ ಡಿ’ಸೋಜಾ,
ಜ. 26ರಂದು ಬೆಳಗ್ಗೆ 10ಕ್ಕೆ (ಕೊಂಕಣಿ) ಬೆಂಗಳೂರಿನ ನಿವೃತ್ತ ಮಹಾ ಧರ್ಮಾಧ್ಯಕ್ಷ ರೈ| ರೆ| ಡಾ| ಬರ್ನಾರ್ಡ್ ಮೊರಾಸ್ ಅವರು ಪ್ರಮುಖ ಬಲಿಪೂಜೆ ನೆರವೇರಿಸಲಿದ್ದಾರೆ ಎಂದು ತಿಳಿದು ಬಂದಿದೆ.
