ಕಾರ್ಕಳ ಪೊಲೀಸ್ ವಸತಿ ಗೃಹದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ -Vishwanews24

Featured, ಉಡುಪಿ

ಕಾರ್ಕಳ ಪೊಲೀಸ್ ವಸತಿ ಗೃಹದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ -Vishwanews24

ಕಾರ್ಕಳ : ಉಡುಪಿ ಜಿಲ್ಲಾ ಪೊಲೀಸ್, ಕಾರ್ಕಳ ಪೊಲೀಸ್ ವಸತಿ ಗೃಹದ ನೂತನ ಕಟ್ಟಡದ ಉದ್ಘಾಟನೆಯನ್ನು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಶನಿವಾರ ನೆರವೇರಿಸಿದರು.

ಕಾರ್ಕಳ ಪೊಲೀಸ್ ಠಾಣೆ ಪಕ್ಕದಲ್ಲೆ ಪೊಲೀಸರ ಅನುಕೂಲಕ್ಕೆ ಈ ವಸತಿ ಗೃಹ ನಿರ್ಮಾಣವಾಗಿದ್ದು, 2018ರಲ್ಲಿ ಕಾಮಗಾರಿಗೆ ಚಾಲನೆ ಸಿಕ್ಕಿದ್ದು, ರಾಜ್ಯ ಪೊಲೀಸ್ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ವತಿಯಿಂದ 92.20 ಕೋ.ರೂ ಮೊತ್ತದಲ್ಲಿ ಸಮುಚ್ಚಯ ನಿರ್ಮಾಣಗೊಂಡಿದೆ. ಎರಡು ಅಂತಸ್ತಿನ 4 ಬ್ಲಾಕ್ಗಳಲ್ಲಿ 48 ಕುಟುಂಬಗಳು ನೆಲೆಸಬಹುದು. ಕಾರ್ಕಳ ನಗರ, ಗ್ರಾಮಾಂತರ, ಅಜೆಕಾರ್ ಠಾಣೆಯ ವ್ಯಾಪ್ತಿಯ ಪೊಲೀಸರಿಗೆ ಇದು ಉಪಯುಕ್ತವಾಗಲಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ನಟ ವಿಜಯ್ ರಾಘವೇಂದ್ರ ಕುಟುಂಬ , ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರಕ್ಕೂ ಭೇಟಿ -Vishwanews24

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ಶಾಸಕ ಸುನೀಲ್ ಕುಮಾರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್, ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಹಾಗೂ ಇತರರು ಉಪಸ್ಥಿತರಿದ್ದರು.