ಕಾಲೇಜು ಎದುರು ರಸ್ತೆ ದಾಟುತ್ತಿದ್ದಾಗ ಲಾರಿ ಡಿಕ್ಕಿ : ಸ್ಥಳದಲ್ಲಿಯೇ ವಿದ್ಯಾರ್ಥಿಯ ದಾರುಣ ಸಾವು -Vishwanews24

Featured, ಉಡುಪಿ

ನಾವುಂದ,: ಕಾಲೇಜು ಎದುರು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ನಾವುಂದದಲ್ಲಿ ನಡೆದಿದೆ.

ಮರವಂತೆಯ ಗಾಂಧಿನಗರದ ನಿವಾಸಿ ಕಿಶನ್ ಖಾರ್ವಿ (17ವ) ಮೃತ ಪಟ್ಟ ದುರ್ದೈವಿ.

ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು ಕಿಶನ್ ಖಾರ್ವಿ ಪಿಯುಸಿ ಶೈಕ್ಷಣಿಕ ಚಟುವಟಿಕೆಯ ಹಿನ್ನೆಲೆಯಲ್ಲಿ ಕಾಲೇಜಿಗೆ ಬಂದು ಕಾಲೇಜಿನಿಂದ ಮರಳುವ ವೇಳೆ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಿಶನ್ ಖಾರ್ವಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.

ಸ್ಥಳಕ್ಕೆ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸುರೇಶ ನಾಯಕ್, ಎಸ್.ಐ ಸಂಗೀತಾ ಭೇಟಿ ನೀಡಿದ್ದಾರೆ. ಗಂಗೊಳ್ಳಿ ಆಪತ್ಬಾಂದವ ಅಂಬುಲೆನ್ಸ್ ಮೂಲಕ ಶವವನ್ನು ಬೈಂದೂರು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.