ಕಾಳಿಮಠದ ಋಷಿಕೇಷ ಸ್ವಾಮೀಜಿ ಮುಖಕ್ಕೆ ಕಪ್ಪು ಮಸಿ ಬಳಿದ ಕನ್ನಡಪರ ಹೋರಾಟಗಾರರು – Vishwanews24
ಕಾಳಿಮಠದ ಋಷಿಕೇಷ ಸ್ವಾಮೀಜಿ ಮುಖಕ್ಕೆ ಕಪ್ಪು ಮಸಿ ಬಳಿದ ಕನ್ನಡಪರ ಹೋರಾಟಗಾರರು
ಬೆಂಗಳೂರು: ಏಕಾಏಕಿ ದೇವಾಲಯದಲ್ಲಿ ಪೂಜೆ ಮುಗಿಸಿ ಹೊರಬರುತ್ತಿದ್ದ ಕಾಳಿಮಠದ ಋಷಿಕೇಷ ಸ್ವಾಮೀಜಿ ಮುಖಕ್ಕೆ ಕಪ್ಪು ಮಸಿ ಬಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇತ್ತೀಚೆಗೆ ನಾಡಪ್ರಭು ಕೆಂಪೇಗೌಡ ಮತ್ತು ರಾಷ್ಟ್ರ ಕವಿ ಕುವೆಂಪು ಅವರ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಲ್ಲೇಶ್ವರಂನ ಗಂಗಮ್ಮನ ದೇವಾಲಯಗಳಲ್ಲಿ ಅವರಿಗೆ ಎದುರಾದ ಗುಂಪೊಂದು ಏಕಾಏಕಿ ಮಸಿ ಬಳಿದಿದೆ.
ಈ ಬಗ್ಗೆ ಮಾತನಾಡಿರುವ ಅವರು ‘ಮಸಿ ಬಳಿದವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ. ಅನಾಮಧೇಯ ವ್ಯಕ್ತಿಗಳು ಸಂಘಟನೆ ಹೆಸರು ಹೇಳಿಕೊಂಡು ಕ್ಷುಲ್ಲಕ ಕಾರಣಕ್ಕೆ ಮಸಿ ಬಳಿದಿದ್ದಾರೆ’ ಎಂದರು.
ನಾನು ಕುವೆಂಪು ವಿರುದ್ಧ ಆಗಲಿ ಕೆಂಪೇಗೌಡರ ವಿರುದ್ಧ ಆಗಲಿ ಯಾವತ್ತು ಮಾತಾಡಿಲ್ಲ. ಮಾತಾಡಿದ್ದೇನೆ ಅನ್ನೋದಾದ್ರೆ ಸಾಬೀತು ಪಡಿಸಲಿ. ಕ್ಷುಲ್ಲಕ್ಕ ಕಾರಣಕ್ಕೆ ಬೇಕಂತಲೆ ಗಲಾಟೆ ಮಾಡಿದ್ದ ಹಾಗೇ ಕಾಣಿಸ್ತಾ ಇದೆ. ಮಸಿ ಬಳಿದವರ ವಿರುದ್ಧ ದೂರು ನೀಡಲಿದ್ದೇವೆ ಎಂದಿದ್ದಾರೆ.
