ಕಾಶ್ಮೀರಿ ಪಂಡಿತರದ್ದು ನರಮೇಧವಾದರೆ, ಜೈಶ್ರೀರಾಮ್ ಹೆಸರಲ್ಲಿ ಮುಸ್ಲಿಂರ ಮೇಲೆ ನಡಿತಿರೋದೇನು?: ನಟಿ ಸಾಯಿ ಪಲ್ಲವಿ – Vishwnaews24
ಕಾಶ್ಮೀರಿ ಪಂಡಿತರದ್ದು ನರಮೇಧವಾದರೆ, ಜೈಶ್ರೀರಾಮ್ ಹೆಸರಲ್ಲಿ ಮುಸ್ಲಿಂರ ಮೇಲೆ ನಡಿತಿರೋದೇನು?: ನಟಿ ಸಾಯಿ ಪಲ್ಲವಿ
ನವದೆಹಲಿ: ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿರುವ ನಟಿ ಸಾಯಿ ಪಲ್ಲವಿ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಇತ್ತೀಚಿಗೆ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲಾದ ಹಲ್ಲೆಯನ್ನು ಹೋಲಿಸಿ ಯಾರನ್ನೂ ಧರ್ಮದ ಹೆಸರಲ್ಲಿ ಹಿಂಸಿಸಬಾರದೆಂದಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಸಾಯಿಪಲ್ಲವಿ ಅವರು ‘ಆ ಸಮಯದಲ್ಲಿ ಕಾಶ್ಮೀರಿ ಪಂಡಿತರನ್ನು ಹೇಗೆ ಕೊಲ್ಲಲಾಯಿತು ಎಂಬುದನ್ನು ಕಾಶ್ಮೀರಿ ಫೈಲ್ಸ್ ಸಿನಿಮಾದಲ್ಲಿ ತೋರಿಸಲಾಗಿದೆ. ನೀವು ಈ ವಿಷಯವನ್ನು ಧಾರ್ಮಿಕ ಸಂಘರ್ಷ ಎಂದು ಪರಿಗಣಿಸುತ್ತಿದ್ದರೆ, ಇತ್ತೀಚೆಗೆ ಗೋವುಗಳನ್ನು ಸಾಗಿಸುತ್ತಿದ್ದ ಮುಸ್ಲಿಂ ಚಾಲಕನನ್ನು ಥಳಿಸಿ ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಒತ್ತಾಯಿಸಿದ ಘಟನೆ ನಡೆದಿದೆ. ಹಾಗಾದರೆ ಈ ಎರಡು ಘಟನೆಗಳ ನಡುವಿನ ವ್ಯತ್ಯಾಸ ಎಲ್ಲಿದೆ’ ಎಂದು ಹೇಳಿದ್ದಾರೆ.
Dear @Sai_Pallavi92
There is a huge difference in a random Muslim being beaten & an entire community being uprooted.
Please don't trivialise my pain.
Come & see any of our broken homes & hearts. We are witnesses to Genocide but await justice.
Not Everything is Propaganda. pic.twitter.com/YhN9r2QTKM
— Kashmiri Hindu (@BattaKashmiri) June 14, 2022
ನಟಿ ಸಾಯಿ ಪಲ್ಲವಿಯ ಮಾತಿಗೆ ಪರ ವಿರೋಧ ವ್ಯಕ್ತವಾಗಿದೆ. ಕೆಲವು ಟ್ವಿಟರ್ ಬಳಕೆದಾರರು ಆಕೆಯ ಧೈರ್ಯವನ್ನು ಶ್ಲಾಘಿಸಿದರೆ, ಇತರರು ಅವರನ್ನು ಟ್ರೋಲ್ ಮಾಡಿದ್ದಾರೆ. ಅವರ ರಾಜಕೀಯ ಒಲವಿನ ಬಗ್ಗೆ ಕೇಳಲಾದ ಪ್ರಶ್ನೆಗೆ, ತಾವು ತಟಸ್ಥ ಕುಟುಂಬದಲ್ಲಿ ಬೆಳೆದರು. ಮತ್ತು ನಮಗೆ ಉತ್ತಮ ಮನುಷ್ಯರಾಗಿ ಬದುಕಲು ಕಲಿಸಲಾಯಿತು. ನೋಯುತ್ತಿರುವವರನ್ನು ರಕ್ಷಿಸಬೇಕು ಎಂದು ನನಗೆ ಕಲಿಸಲಾಗಿದೆ, ದಮನಿತರನ್ನು ರಕ್ಷಿಸಬೇಕು ಎಂದು ಅವರು ಹೇಳಿದರು.
ತಮ್ಮ ಜೀವನದ 100 ನೇ ವರ್ಷಕ್ಕೆ ಕಾಲಿಟ್ಟ ಪ್ರಧಾನಿ ಮೋದಿ ಅವರ ತಾಯಿ – Vishwanews24
