ಕುಂದಾಪುರ: ನದಿ ತೀರದಲ್ಲಿ ನಿಲ್ಲಿಸಿದ್ದ 8 ಬೋಟುಗಳು ಬೆಂಕಿಗಾಹುತಿ ; ಕೋಟ್ಯಾಂತರ ರೂ. ನಷ್ಟ – vishwanews24
ಕುಂದಾಪುರ: ನದಿ ತೀರದಲ್ಲಿ ನಿಲ್ಲಿಸಿದ್ದ 8 ಬೋಟುಗಳು ಬೆಂಕಿಗಾಹುತಿ ; ಕೋಟ್ಯಾಂತರ ರೂ. ನಷ್ಟ
ಕುಂದಾಪುರ : ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ನದಿ ತೀರದಲ್ಲಿ ನಿಲ್ಲಿಸಲಾಗಿದ್ದ ಎಂಟು ಬೋಟುಗಳು ಬೆಂಕಿಗಾಹುತಿಯಾಗಿ ಕೋಟ್ಯಂತರ ಮಿಕ್ಕಿ ನಷ್ಟ ಸಂಭವಿಸಿದ ಘಟನೆ ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯಲ್ಲಿ ನಡೆದಿದೆ.
ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯಲ್ಲಿ ಸಮುದ್ರ ತೀರದಲ್ಲಿ ಹಲವಾರು ಬೋಟುಗಳನ್ನು ನಿಲ್ಲಿಸಲಾಗಿದ್ದು, ಈ ಘಟನೆಯಲ್ಲಿ 8 ಬೋಟುಗಳಿಗೆ ಬೆಂಕಿ ಹತ್ತಿಕೊಂಡು ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ.
ಬೆಂಕಿ ಅನಾಹುತಕ್ಕೆ ಎಂಟು ಬೋಟಗಳು ಸುಟ್ಟು ಭಸ್ಮವಾಗಿವೆ. ಘಟನಾ ಸ್ಥಳಕ್ಕೆ ಕುಂದಾಪುರ ಅಗ್ನಿಶಾಮಕದಳ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದೆ. ಬೈಂದೂರು ಅಗ್ನಿಶಾಮಕ ದಳ ಆಗಮಿಸುತ್ತಿದೆ. ಗಂಗೊಳ್ಳಿ ಕರಾವಳಿ ಕಾವಲುಪಡೆ, ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
