ಕುಂದಾಪುರ : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಶಾಕ್: ಯುವಕ ಮೃತ್ಯು – Vishwanews24

Featured, ಉಡುಪಿ

ಕುಂದಾಪುರ : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಶಾಕ್ : ಯುವಕ ಮೃತ್ಯು

ಶಂಕರನಾರಾಯಣ, : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಆಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ಶಂಕರನಾರಾಯಣ ಗ್ರಾಮದ ಮೂಡ ಬೈಲ್ಲೂರು ಎಂಬಲ್ಲಿ ನ.14ರಂದು ರಾತ್ರಿ ವೇಳೆ ನಡೆದಿದೆ.

ಮೃತರನ್ನು ಉತ್ತರ ಪ್ರದೇಶ ಮೂಲದ ವಸಿಷ್ಠ ಪಾಸ್ವಾನ್(34) ಎಂದು ಗುರುತಿಸಲಾಗಿದೆ.

ನ. 19 ರಿಂದ 23 ರ ವರೆಗೆ ಧರ್ಮಸ್ಥಳ ಲಕ್ಷ ದೀಪೋತ್ಸವ – Vishwanews24

ಇವರು ತನ್ನ ಸಂಬಂಧಿಕರೊಂದಿಗೆ ಮೂಡ ಬೈಲ್ಲೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ರಾತ್ರಿ ತೋಟದ ಪಂಪಸೆಟ್ ಶೆಡ್‌ನಲ್ಲಿ ಮೊಬೈಲ್ ಚಾರ್ಜ್ ಹಾಕಲು ಹೋಗಿದ್ದ ಇವರಿಗೆ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆಯಿತ್ತೆನ್ನಲಾಗಿದೆ. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಇವರು, ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಚ್ಚಿಲ : ಬೈಕ್ ಗೆ ಟಿಪ್ಪರ್ ಡಿಕ್ಕಿ: ಯುವತಿ‌ ಮೃತ್ಯು, ಯುವಕನಿಗೆ ಗಾಯ – Vishwanews24

Leave a Reply