ಕುಂದಾಪುರ: ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ – ಯುವಕ ಸಾವು – vishwanews24

Featured, ಉಡುಪಿ

ಕುಂದಾಪುರ: ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ – ಯುವಕ ಸಾವು

ಕುಂದಾಪುರ: ಕಲ್ಲಂಗಡಿ ಲೋಡ್ ಮಾಡುವವರ ಬಳಿ ಮಾತನಾಡಿ ಬರುತ್ತೇನೆಂದು ತೆರಳಿದ್ದ ಯುವಕ ರೈಲ್ವೇ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಕಿರಿಮಂಜೇಶ್ವರದ ನಾಗೂರಿನಲ್ಲಿ ಮಂಗಳವಾರ ಸಂಜೆ ನಡೆದಿದೆ. ಬಿಜೂರು ಗ್ರಾಮದ ದೀಟಿಮನೆ ನಿವಾಸಿ ಮುತ್ತಯ್ಯ ದೇವಾಡಿಗ ಎಂಬುವರ ಹಿರಿಯ ಪುತ್ರ ವಾಸುದೇವ ದೇವಾಡಿಗ ಯಾನೇ ಮಣಿಕಂಠ (25) ಸಾವನ್ನಪ್ಪಿದ ದುರ್ದೈವಿ.

ವೃತ್ತಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ವಾಸುದೇವ ದೇವಾಡಿಗ ಸುಮಾರು 5 ಎಕ್ರೆ ಜಾಗದಲ್ಲಿ ಕಲ್ಲಂಗಡಿ ಬೆಳೆದಿದ್ದರು. ಇನ್ನು ಎರಡು ಮೂರು ದಿನದಲ್ಲಿ ಕಲ್ಲಂಗಡಿ ಕಟಾವಿಗೆ ಸಿದ್ಧತೆ ಮಾಡಿದ್ದರು. ನಾಗೂರಿನಲ್ಲಿ ಫೆಬ್ರುವರಿ, 4 ರಂದು ಮಂಗಳವಾರ ಸಂಜೆ ಸೆಂಟ್ರಿಂಗ್ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ತನ್ನ ವಾಹನವನ್ನು ಕಲ್ಲಂಗಡಿ ಹಣ್ಣಿನ ಲೋಡ್ ಮಾಡಲು ಮತ್ತೊಬ್ಬರಿಗೆ ನೀಡಿದ್ದು, ಅವರು ವಾಹನವನ್ನು ಅವರು ರೈಲ್ವೆ ಹಳಿ ಪಶ್ಚಿಮ ದಿಕ್ಕಿನಲ್ಲಿ ನಿಲ್ಲಿಸಿ ಕಲ್ಲಂಗಡಿ ಹಣ್ಣಿನ ಲೋಡ್ ಮಾಡುತ್ತಿದ್ದವರ ಬಳಿ ಮಾತನಾಡಿ ಹಣ ಕೊಟ್ಟು ಬರುತ್ತೇನೆಂದು ರೈಲ್ವೇ ಹಳಿ ದಾಟಿ ಹೋಗಿ ವಾಪಾಸು ಬರುತ್ತಿದ್ದರು.

ನನ್ನ ವೈಯಕ್ತಿಕ ನಂಬಿಕೆ ಭಕ್ತಿಯನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ : ಡಿ.ಕೆ.ಶಿವಕುಮಾರ್ – vishawanews24

ಈ ವೇಳೆ ಮಂಗಳೂರು ಕಡೆಯಿಂದ ಮಡಗಾಂವ್ ಕಡೆಗೆ ರೈಲು ಬರುತ್ತಿರುವುದನ್ನು ಕೊನೆಯ ಕ್ಷಣದಲ್ಲಿ ಗಮನಿಸಿದ ವಾಸುದೇವ ತಪ್ಪಿಸಿಕೊಳ್ಳಲು ಯತ್ನಿಸಿ ಹಳಿಯ ಪಕ್ಕಕ್ಕೆ ಸರಿದು ತಿರುಗಿದಾಗ ಮುಖಕ್ಕೆ ರೈಲು ಡಿಕ್ಕಿಯಾಗಿ ತಲೆ ಛಿದ್ರವಾಗಿದೆ.

ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವಾಸುದೇವ ಮುತ್ತಯ್ಯ ದೇವಾಡಿಗರ ಐದು ಜನ ಮಕ್ಕಳ ಪೈಕಿ ಹಿರಿಯವನಾಗಿದ್ದಾನೆ.

ರಾಜ್ಯಪಾಲರು ಸೂಚಿಸಿದರೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯಲ್ಲಿ ಬದಲಾವಣೆ ಮಾಡ್ತೀವಿ: ಜಿ.ಪರಮೇಶ್ವರ್ – vishwanews24

Leave a Reply