ಕುಕ್ಕೆ ಸುಬ್ರಹ್ಮಣ್ಯ : ಕೊರೊನಾ ಹಿನ್ನಲೆ ನಿಲ್ಲಿಸಲಾಗಿದ್ದ ಸೇವೆಗಳಿಗೆ ಅನುಮತಿ – Vishwanews24
ಕುಕ್ಕೆ ಸುಬ್ರಹ್ಮಣ್ಯ : ಕೊರೊನಾ ಹಿನ್ನಲೆ ನಿಲ್ಲಿಸಲಾಗಿದ್ದ ಸೇವೆಗಳಿಗೆ ಅನುಮತಿ – Vishwanews24
ಸುಬ್ರಹ್ಮಣ್ಯ: ಕೊರೊನಾ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿಲ್ಲಿಸಲಾಗಿದ್ದ ಸೇವೆಗಳಿಗೆ ಇದೀಗ ಮತ್ತೆ ಅನುಮತಿ ನೀಡಲಾಗಿದೆ.
ಕೊರೊನಾ ಮೂರನೆ ಅಲೆ ಹಿನ್ನಲೆ ಸರಕಾರದ ಆದೇಶದಂತೆ ಸೇವೆಗಳನ್ನು ರದ್ದು ಪಡಿಸಲಾಗಿತ್ತು. ಇದೀಗ ಕೊರೊನಾ ಪ್ರಕರಣಗಳ ತೀವ್ರತೆ ಇಳಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಮತ್ತು ಸೇವೆಗಳಿಗೆ ಅನುಮತಿ ನೀಡಲಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಕೋವಿಡ್ 19ರ ನಿಯಮಗಳನ್ನು ಪಾಲಿಸಿಕೊಂಡು ಈ ಹಿಂದಿನಂತೆ ಭಕ್ತರು ಸೇವೆಗಳನ್ನು ನೆರವೇರಿಸಲು ಅವಕಾಶ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
“ಆತ್ಮನಿರ್ಭರ ಭಾರತ”ದ ಮಹತ್ವದ ಕುರಿತು ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಭಾಷಣ – Vishwanews24
