ಕುಕ್ಕೆ ಸುಬ್ರಹ್ಮಣ್ಯ, ಸೌತಡ್ಕ ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ ವೀಶೆಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದ ಕ್ರಿಕೆಟಿಗ ಕೆ. ಎಲ್. ರಾಹುಲ್ – vishwanews24

Featured, ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ, ಸೌತಡ್ಕ ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ ವೀಶೆಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದ ಕ್ರಿಕೆಟಿಗ ಕೆ. ಎಲ್. ರಾಹುಲ್

ಪುತ್ತೂರು : ಕ್ರಿಕೆಟಿಗ ಕೆ ಎಲ್ ರಾಹುಲ್ ಕರಾವಳಿಯಲ್ಲಿನ ಟೆಂಪಲ್ ರನ್ ನಡೆಸಿದ್ದಾರೆ. ಸ್ನೇಹಿತರ ಜೊತೆಗೆ ಶ್ರೀ ಕ್ಷೇತ್ರ ಕೊಲ್ಲೂರಿಗೆ ಭೇಟಿ ನೀಡಿದ್ದ ರಾಹುಲ್ ಬುಧವಾರ ಕುಕ್ಕೆ ಸುಬ್ರಹ್ಮಣ್ಯ, ಬಯಲು ಕ್ಷೇತ್ರ ಸೌತಡ್ಕ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ವೀಶೆಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕಾರ ಮಾಡಿದರು.

ಸುಬ್ರಹ್ಮಣ್ಯದಲ್ಲಿ ದೇವಳದ ವತಿಯಿಂದ ಕೆ.ಎಲ್.ರಾಹುಲ್‌ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಅಧಿಕಾರಿಗಳು, ಸಿಬ್ಬಂದಿ, ಅಭಿಮಾನಿಗಳು ರಾಹುಲ್ ಜೊತೆ ಫೊಟೊ ಕ್ಲಿಕ್ಕಿಸಿಕೊಂಡರು.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ವೇಳೆ ಬಯಲು ಆಲಯ ಗಣಪ ಕ್ಷೇತ್ರ ಬೆಳ್ತಂಗಡಿ ತಾಲೂಕಿನ ಸೌತಡ್ಕಕ್ಕೂ ಕ್ರಿಕೆಟಿಗ ಕೆ.ಎಲ್‌.ರಾಹುಲ್‌ ಭೇಟಿ ನೀಡಿದರು. ಬಯಲು ಆಲಯ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ರಾಹುಲ್ ಅವರು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ – vishwanews24

ಈ ಸಂದರ್ಭದಲ್ಲಿ ಕ್ಷೇತ್ರದ ಸಮಿತಿಯಿಂದ ಕ್ರಿಕೆಟಿಗ ಕೆ ಎಲ್‌ ರಾಹುಲ್‌ ಅವರನ್ನು ಸನ್ಮಾನಿಸಲಾಯಿತು. ದೇವಸ್ಥಾನದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಹಾಗೂ ಅರ್ಚಕರು ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೂ ಭೇಟಿ ನೀಡಿದ ರಾಹುಲ್ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು .

ಉಡುಪಿ : ಪರಶುರಾಮ ಥೀಂ ಪಾರ್ಕ್ ಹಾಗೂ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅವ್ಯವಹಾರದ ಬಗ್ಗೆ ಸೂಕ್ತ ತನಿಖೆ: ಸಚಿವೆ ಹೆಬ್ಬಾಳ್ಕರ್

Leave a Reply