ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಬಲಿ, ಸರ್ಪ ಸಂಸ್ಕಾರ ಸೇವೆ ಸಲ್ಲಿಸಿದ ಬಾಲಿವುಡ್​ ನಟ ಅರ್ಜುನ್ ಕಪೂರ್ – vishwanews24

Featured, ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಬಲಿ, ಸರ್ಪ ಸಂಸ್ಕಾರ ಸೇವೆ ಸಲ್ಲಿಸಿದ ಬಾಲಿವುಡ್​ ನಟ ಅರ್ಜುನ್ ಕಪೂರ್

ಸುಬ್ರಹ್ಮಣ್ಯ: ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರತೀ ದಿನ ಭಕ್ತರ ದಂಡು ಹರಿದುಬರುತ್ತದೆ. ನಾಗಾರಾಧನೆಯ ಪುಣ್ಯಕ್ಷೇತ್ರವು ಜನಸಾಮಾನ್ಯರನ್ನು ಮಾತ್ರವಲ್ಲದೇ ಹೆಸರಾಂತ ಸೆಲೆಬ್ರಿಟಿಗಳನ್ನೂ ತನ್ನತ್ತ ಆಕರ್ಷಿಸುತ್ತದೆ. ಈಗಾಗಲೇ ಹಲವು ಜನಪ್ರಿಯ ತಾರೆಯರು ಇಲ್ಲಿಗೆ ಭೇಟಿ ಕೊಟ್ಟಿದ್ದು, ಇದೀಗ ಅರ್ಜುನ್ ಕಪೂರ್ ಕೂಡಾ ದೇವರ ದರ್ಶನ ಪಡೆದಿದ್ದಾರೆ. ಜೊತೆಗೆ, ವಿಶೇಷ ಪೂಜಾ ವಿಧಿ ವಿಧಾನಗಳಲ್ಲಿಯೂ ಭಾಗಿಯಾಗಿ ಧನ್ಯರಾಗಿದ್ದಾರೆ.

ಬಾಲಿವುಡ್ ಸೂಪರ್ ಸ್ಟಾರ್ ಅರ್ಜುನ್ ಕಪೂರ್ ಅವರು ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿದರು. ಕಳೆದ ಮೂರು ದಿನಗಳಿಂದ ಕುಕ್ಕೆ ಕ್ಷೇತ್ರದಲ್ಲಿ ವಾಸ್ತವ್ಯವಿದ್ದ ಅವರು ಭಾನುವಾರ ಸರ್ಪ ಸಂಸ್ಕಾರ ಸೇವೆ ಸಲ್ಲಿಸಿದ್ದು, ಸೋಮವಾರ ಆಶ್ಲೇಷ ಬಲಿ ಪೂಜೆಯಲ್ಲಿ ಭಾಗವಹಿಸಿದರು.

ಇದನ್ನೂ ಓದಿ:👇

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆಯೂ ಮಂಗಳೂರು-ಮಸ್ಕತ್ ವಿಮಾನ ಯಾನ ಆರಂಭಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ – vishwanews24

 

ಪೂಜೆ ಬಳಿಕ ಅವರು ದೇವಾಲಯದ ಆಡಳಿತ ಕಚೇರಿಗೆ ಭೇಟಿ ನೀಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಅಧ್ಯಕ್ಷರು, ನಟರನ್ನು ದೇಗುಲದ ವತಿಯಿಂದ ಗೌರವಿಸಿದರು. ಈ ವೇಳೆ ದೇವಾಲಯದ ಪಿಆರ್‌ಒ ಜಯರಾಮ್ ರಾವ್, ಮನ್ಮಥ ಬಟ್ಟೋಡಿ ಸೇರಿದಂತೆ ದೇವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ನಟ ಅರ್ಜುನ್ ಕಪೂರ್ ಅವರ ಭೇಟಿ ಕ್ಷೇತ್ರದಲ್ಲಿ ವಿಶೇಷ ಗಮನ ಸೆಳೆಯಿತು.

ಇದನ್ನೂ ಓದಿ:👇

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ: ಸಿಲಿಂಡರ್ ಬುಕಿಂಗ್ ನಲ್ಲಿ ಮಹತ್ವದ ಬದಲಾವಣೆ – vishwanews24

Leave a Reply