ಕುಲಾಲ ಸಂಘ (ರಿ) ನಾನಿಲ್ತಾರ್ ಮುಂಡ್ಕೂರು ಆಶ್ರಯದಲ್ಲಿ ಕುಲಾಲ ಕ್ರೀಡಾಕೂಟ – Vishwanews24

Featured, ಉಡುಪಿ

ಕುಲಾಲ ಸಂಘ (ರಿ) ನಾನಿಲ್ತಾರ್ ಮುಂಡ್ಕೂರು ಆಶ್ರಯದಲ್ಲಿ ಕುಲಾಲ ಬಾಂಧವರಿಗಾಗಿ ಕುಲಾಲ ಕ್ರೀಡಾಕೂಟ

ಮುಂಡ್ಕೂರು : ಕುಲಾಲ ಸಂಘ (ರಿ) ನಾನಿಲ್ತಾರ್ ಮುಂಡ್ಕೂರು ಇದರ ಯುವ ವೇದಿಕೆ ಆಶ್ರಯದಲ್ಲಿ ಸಂಘದ ಸ್ಥಾಪಕ ಅಧ್ಯಕ್ಷರು ದಿ. ಸುಂದರ ಮೂಲ್ಯ ಕ್ರೀಡಾಂಗಣದಲ್ಲಿ ಕುಲಾಲ ಬಾಂಧವರಿಗಾಗಿ ಕುಲಾಲ ಕ್ರೀಡಾಕೂಟ ಅಯೋಜಿಸಲಾಗಿತು.

ಸಂಘದ ಅಧ್ಯಕ್ಷರು ಶ್ರೀ ಕುಶ ಆರ್ ಮೂಲ್ಯ ಅಧ್ಯಕ್ಷತೆಯಲ್ಲಿ ಕುತ್ಯಾರುವಿನ ಖ್ಯಾತ ನ್ಯಾಯವಾದಿ ಜಗದೀಶ್ ಮೂಲ್ಯ ಉದ್ಘಾಟಿಸಿದರು.. ಮುಖ್ಯ ಅತಿಥಿಯಾಗಿ ಲವ ಆರ್ ಮೂಲ್ಯ ಇನ್ನ, ಸದಾನಂದ ಮೂಲ್ಯ ಕುವೈಟ್,ಸಂಘದ ಉಪಾಧ್ಯಕ್ಷರಾದ ಬೊಗ್ಗು ಮೂಲ್ಯ ಬೇಲಾಡಿ,ಜಯರಾಮ ಕುಲಾಲ್, ಸಂಘದ ಮಾಜಿ ಅಧ್ಯಕ್ಷರಾದ ಮಂಜಪ್ಪ ಮೂಲ್ಯ,ಗುತ್ತಿಗೆದಾರರಾದ ಬೊಗ್ಗು ಮೂಲ್ಯ ಬೆಳ್ಮಣ್,ಬಿ ವಾರಿಜ, ಮಹಿಳಾ ಘಟಕದ ಅಧ್ಯಕ್ಷರು ಶ್ರೀಮತಿ ಪ್ರತಿಮಾ,ಯುವ ವೇದಿಕೆ ಅಧ್ಯಕ್ಷರಾದ ಶ್ರೀ ದೀಪಕ್ ಕುಲಾಲ್ ಬೆಳ್ಮಣ್,ಕಾರ್ಯದರ್ಶಿ ಸಂತೋಷ್,ಉಪಾಧ್ಯಕ್ಷರಾದ ಗಿರೀಶ್ ಬೆಳ್ಮಣ್ ಉಪಸ್ಥಿತರಿದ್ದರು.

ಕಾರ್ಯದರ್ಶಿ ದಿನೇಶ್ ಕುಲಾಲ್ ಸ್ವಾಗತಿಸಿ,ಶಿಕ್ಷಕರಾದ ಶ್ರೀಕಾಂತ್ ಕುಲಾಲ್ ಧನ್ಯವಾದಗಳು ಸಲ್ಲಿಸಿದರು ,ಶ್ರೀಮತಿ ಆಶಾ ವರದರಾಜ್ , ಕುಮಾರಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು..

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ :  ನಾಳೆಯಿಂದ ಕರಾವಳಿ ಸೇರಿ ರಾಜ್ಯದಲ್ಲಿ ಮತ್ತೆ  ಮಳೆಯ ಆರ್ಭಟ   – Vishwanews24

Leave a Reply