ಕೇಂದ್ರ ಸರ್ಕಾರ ನಾರಾಯಣ ಗುರು ಸ್ತಬ್ಧಚಿತ್ರ ತಿರಸ್ಕರಿಸಿಲ್ಲ : ಪ್ರಲ್ಹಾದ ಜೋಶಿ ಸ್ಪಷ್ಟನೆ – Vishwanews24

Featured, ರಾಜ್ಯ ನ್ಯೂಸ್

ಕೇಂದ್ರ ಸರ್ಕಾರ ನಾರಾಯಣ ಗುರು ಸ್ತಬ್ಧಚಿತ್ರ ತಿರಸ್ಕರಿಸಿದೆ ಹಾಗೂ ಶಂಕರಾಚಾರ್ಯರ ಸ್ತಬ್ಧಚಿತ್ರ ಕಳಿಸುವಂತೆ ಸೂಚಿಸಿದೆ ಎಂಬುದು ಸುಳ್ಳು  ..

2018 ಮತ್ತು 2021ರಲ್ಲಿ ಕೇರಳದ ಸ್ತಬ್ಧಚಿತ್ರಗಳು ಆಯ್ಕೆಯಾಗಿದ್ದವು ..

ಈ ಸಲ ಬೇರೆ ರಾಜ್ಯಗಳಿಗೆ ಅವಕಾಶ ನೀಡಲಾಗಿದೆ..

ಕಾಂಗ್ರೆಸ್ ಆರಂಭಿಸಿದ ಈ ನಿಯಮವನ್ನು ಇಂದಿಗೂ ಪಾಲಿಸಿಕೊಂಡು ಬರಲಾಗುತ್ತಿದೆ..

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆ ..

ಹುಬ್ಬಳ್ಳಿ: ‘ಗಣರಾಜ್ಯೋತ್ಸವ ಅಂಗವಾಗಿ ಕೇರಳ ರಾಜ್ಯ ಕಳಿಸಿದ್ದ ನಾರಾಯಣ ಗುರು ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಹಾಗೂ ಶಂಕರಾಚಾರ್ಯರ ಸ್ತಬ್ಧಚಿತ್ರ ಕಳಿಸುವಂತೆ ಸೂಚಿಸಿದೆ ಎಂಬುದು ಸುಳ್ಳು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ದೇಶದಲ್ಲಿ 36 ರಾಜ್ಯಗಳಿವೆ. ಪ್ರತಿ ವರ್ಷ 12 ಸ್ತಬ್ಧಚಿತ್ರಗಳನ್ನು ಗಣರಾಜ್ಯೋತ್ಸವಕ್ಕೆ ಆಯ್ಕೆ ಮಾಡಲಾಗುತ್ತದೆ. ಇದಕ್ಕೆ ಲಿಖಿತವಾದ ಯಾವುದೇ ನಿಯಮಗಳಿಲ್ಲ’ ಎಂದರು.

ಮಂಗಳೂರು: ನಾರಾಯಣ ಗುರು ಟ್ಯಾಬ್ಲೋ ವಿವಾದ : ಕಾಂಗ್ರೆಸ್ ಕಚೇರಿಯಲ್ಲಿ ರಮಾನಾಥ ರೈ ಹಾಗು ಯುವ ಕಾರ್ಯಕರ್ತರ ವಾಗ್ವಾದ – Vishwanews24

‘ಆದರೂ, ಮೂರು ವರ್ಷಕ್ಕೊಮ್ಮೆ ಪ್ರತಿ ರಾಜ್ಯದ ಸ್ತಬ್ಧಚಿತ್ರಗಳು ಆಯ್ಕೆಯಾಗುವುದು ಅಲಿಖಿತ ನಿಯಮ. 2018 ಮತ್ತು 2021ರಲ್ಲಿ ಕೇರಳದ ಸ್ತಬ್ಧಚಿತ್ರಗಳು ಆಯ್ಕೆಯಾಗಿದ್ದವು. ಹಾಗಾಗಿ, ಈ ಸಲ ಬೇರೆ ರಾಜ್ಯಗಳಿಗೆ ಅವಕಾಶ ನೀಡಲಾಗಿದೆ. ಕಾಂಗ್ರೆಸ್ ಆರಂಭಿಸಿದ ಈ ನಿಯಮವನ್ನು ಇಂದಿಗೂ ಪಾಲಿಸಿಕೊಂಡು ಬರಲಾಗುತ್ತಿದೆ’ ಎಂದು ಸ್ಪಷ್ಟಪಡಿಸಿದರು.

‘ನಾರಾಯಣ ಗುರು ಹಾಗೂ ಶಂಕರಾಚಾರ್ಯ ಇಬ್ಬರೂ ಸಮಾಜ ಸುಧಾರಣೆಗೆ ಮಹತ್ತರ ಕೊಡುಗೆ ನೀಡಿದ್ದಾರೆ. ನಾರಾಯಣ ಗುರು ಅವರ ಪ್ರತಿಮೆ ಒಡೆದು ಹಾಕಿದ್ದ ಕಮ್ಯುನಿಸ್ಟ್ ಸರ್ಕಾರವೇ ಈ ವಿಷಯದಲ್ಲಿ ರಾಜಕಾರಣ ಮಾಡಲು ಮುಂದಾಗಿದೆ. ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಈ ಬೆಳವಣಿಗೆ ಕುರಿತು ತಪ್ಪು ಹೇಳಿಕೆ ನೀಡುವುದಕ್ಕೂ ಮುಂಚೆ, ಸತ್ಯಾಸತ್ಯತೆ ಅರಿಯಬೇಕು’ ಎಂದರು.

ಸಮಾಜ ಸೇವೆಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಿಗೆ ಕೇರಳ ರಾಜ್ಯದಲ್ಲಿ ಸನ್ಮಾನ:vishwanews24

 

Leave a Reply