ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಗರು ಜನಾಕ್ರೋಶ ಯಾತ್ರೆ ಮಾಡಲಿ : ಡಿ.ಕೆ. ಶಿವಕುಮಾರ್  – vishwanews24

Featured, ರಾಜ್ಯ ನ್ಯೂಸ್

ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಗರು ಜನಾಕ್ರೋಶ ಯಾತ್ರೆ ಮಾಡಲಿ : ಡಿ.ಕೆ. ಶಿವಕುಮಾರ್ 

ಬೆಂಗಳೂರು: “ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಗರು ಜನಾಕ್ರೋಶ ಯಾತ್ರೆ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ ಪಿಜಿ ಹಾಗೂ ಇಂಧನ ತೈಲಗಳ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಿಯುಸಿ ಫಲಿತಾಂಶದಲ್ಲಿ ಉಡುಪಿ ಪ್ರಥಮ : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹರ್ಷ – vishwanews24

“ರಾಜ್ಯದಲ್ಲಿ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡುತ್ತಿದ್ದು, ಇವರಿಗೆ ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿ ಕಪಾಳಮೋಕ್ಷ ಮಾಡಿದೆ. ಬಿಜೆಪಿ ನಾಯಕರು ತಮ್ಮ ಆಕ್ರೋಶವನ್ನು ಕೇಂದ್ರ ಸರ್ಕಾರದ ವಿರುದ್ಧ ಮುಂದುವರಿಸಲಿ ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ” ಎಂದು ವ್ಯಂಗ್ಯವಾಡಿದ್ದಾರೆ.

Leave a Reply