ಕೇಂದ್ರದಿಂದ ನೆರೆ ಪರಿಹಾರ ಹಣ ಬಂದೇ ಬರುತ್ತದೆ, ತಾಂತ್ರಿಕ ಕಾರಣಗಳಿಂದ ಪರಿಹಾರ ಹಣ ಬರುವುದು ತಡವಾಗಿದೆ : ಸುಮಲತಾ -Vishwanews24

Featured, ರಾಜ್ಯ ನ್ಯೂಸ್

ಮೈಸೂರು:ಕೇಂದ್ರದಿಂದ ನೆರೆ ಪರಿಹಾರ ಹಣ ಬಂದೇ ಬರುತ್ತದೆ, ತಾಂತ್ರಿಕ ಕಾರಣಗಳಿಂದ ಪರಿಹಾರ ಹಣ ಬರುವುದು ತಡವಾಗಿದೆ ಎಂದು ಸಂಸದೆ ಸುಮಲತಾ ಹೇಳಿದರು

ಮೈಸೂರಿನಲ್ಲಿ ಮಾತನಾಡಿದ ಸುಮಲತಾ ಅವರು, ಯಶ್ ಹಾಗೂ ದರ್ಶನ್ ಬರಬೇಕು ಎಂಬುದು ತುಂಬಾ ಚಿಕ್ಕ ವಿಷಯ. ಏಕೆಂದರೆ ಎಂಪಿಯಾಗಿ ಆಯ್ಕೆಯಾಗಿರುವುದು ನಾನು. ಯಶ್ ಹಾಗೂ ದರ್ಶನ್ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ನಮಗೆ ಬೆಂಬಲ ನೀಡಲು ಬರುತ್ತಾರೆ. ಸರ್ಕಾರದಲ್ಲಿ ಅವರಿಗೆ ಯಾವುದೇ ಅಧಿಕಾರ ಇಲ್ಲ. ಅವರು ಬಂದು ಏನೂ ಮಾಡುತ್ತಾರೆ. ನನ್ನ ಕೆಲಸ ನಾನು ಮಾಡಬೇಕು. ಯಶ್ ಹಾಗೂ ದರ್ಶನ್ ಮಂಡ್ಯಕ್ಕೆ ಬರುತ್ತಾರೆ. ಮೊದಲಿನಿಂದಲೂ ಅವರು ಬರುತ್ತಿದ್ದಾರೆ ಎಂದು ಹೇಳಿದ್ದಾರೆ.

ಕೇಂದ್ರದ ನೆರೆ ಪರಿಹಾರ ಹಣ ನೀಡದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪರಿಹಾರ ಹಣ ಬಂದೇ ಬರುತ್ತದೆ. ಏನೋ ತಾಂತ್ರಿಕ ಕಾರಣ ಉಂಟಾಗಿದೆ. ಹೀಗಾಗಿ ಪರಿಹಾರ ಹಣ ಬರುವುದು ತಡವಾಗಿದೆ. ಆದರೆ ಪರಿಹಾರ ಹಣ ಬರುತ್ತೆ ಎಂಬ ವಿಶ್ವಾಸ ನನಗಿದೆ. ಜನರು ಪ್ರಶ್ನೆ ಮಾಡುತ್ತಿರುವುದು ಒಳ್ಳೆಯದು. ನಾವು ಯಾರ ಬಳಿ ಮಾತನಾಡಬೇಕೋ ಅವರ ಬಳಿ ಮಾತನಾಡುತ್ತಿದ್ದೇವೆ. ಅವರು ಇದೇ ಕಾರಣವನ್ನು ನೀಡುತ್ತಿದ್ದಾರೆ ಎಂದು ಸುಮಲತಾ ತಿಳಿಸಿದ್ದಾರೆ.

ನಾನು ಎಂಪಿ ಆಗಿರುವುದು ಜೆಡಿಎಸ್ ನಾಯಕರಿಗೆ ಉತ್ತರ ಕೊಡುವುದ್ದಕ್ಕೆ ಅಲ್ಲ. ನನ್ನ ಉತ್ತರ ಏನಿದ್ದರೂ ನನಗೆ ಮತ ನೀಡಿದ ಮಂಡ್ಯ ಜನತೆಗೆ ಮಾತ್ರ. ನಾನು ರಾಜಕೀಯವಾಗಿ ಮಾತನಾಡುವವರಿಗೆ ಉತ್ತರ ನೀಡಲ್ಲ. ಸುಮಕ್ಕ ಎಲ್ಲಿದ್ದಾರೆ ಎಂದು ಪ್ರಶ್ನೆ ಕೇಳುತ್ತಾರೆ. ನಾನು ಎಲ್ಲಿಯೂ ಹೋಗಿಲ್ಲ. ನಾನು ಇಲ್ಲಿಯೇ ಇದ್ದೀನಿ ಹಾಗೂ ನನ್ನ ಕೆಲಸ ಮಾಡುತ್ತಿದ್ದೇನೆ. ಯಾರಿಗೆ ಒತ್ತಡ ಹೇರಬೇಕೋ, ಯಾರ ಬಳಿ ಮನವಿ ಮಾಡಬೇಕೋ ಎಲ್ಲವನ್ನು ನಾನು ಮಾಡುತ್ತಿದ್ದೇನೆ ಎಂದರು.