ಕೊಕ್ಕಡ: 9 ಮಂದಿ ದುಷ್ಕರ್ಮಿಗಳಿಂದ ಮನೆ ಮಾಲಿಕನನ್ನು ಕಟ್ಟಿಹಾಕಿ ದರೋಡೆ -Vishwanews24
ಕೊಕ್ಕಡ: 9 ಮಂದಿ ದುಷ್ಕರ್ಮಿಗಳಿಂದ ಮನೆ ಮಾಲಿಕನನ್ನು ಕಟ್ಟಿಹಾಕಿ ದರೋಡೆ -Vishwanews24
ಬೆಳ್ತಂಗಡಿ: ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆಯ ನೂಜೆ ತುಕ್ರಪ್ಪ ಶೆಟ್ಟಿ ಯವರ ಮನೆಗೆ ಸುಮಾರು ಒಂಭತ್ತು ಮಂದಿ ದರೋಡೆಕೋರರ ತಂಡವು ಸೋಮವಾರ ಬೆಳಗಿನ ಜಾವ ನುಗ್ಗಿ ಮನೆಯ ಯಜಮಾನ ಮತ್ತು ಅವರ ಪತ್ನಿಯ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ಮೌಲ್ಯದ ನಗ, ನಗದು ದೋಚಿದ ಘಟನೆ ವರದಿಯಾಗಿದೆ.
ಮನೆ ಮಾಲಿಕರಾದ ತುಕರಪ್ಪ ಶೆಟ್ಟಿ ಅವರನ್ನು ಕಟ್ಟಿ ಹಾಕಿದ ದರೋಡೆಕೋರರು ದರೋಡೆ ಮಾಡಲು ಯತ್ನಿಸಿದ ವೇಳೆ ಅದನ್ನು ತಡೆಯಲು ಬಂದ ತುಕರಪ್ಪ ಶೆಟ್ಟಿ ಅವರ ಪತ್ನಿ ಗೀತಾ ಅವರ ಮೇಲೆ ಚೂರಿಯಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಈ ದಾಳಿಯ ಪರಿಣಾಮ ಗೀತಾ ಶೆಟ್ಟಿ ಅವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರೆಸಿದ್ದಾರೆ.
