ಕೊಕ್ಕಡದಲ್ಲಿ ಕಾರು-ಬಸ್ ನಡುವೆ ಭೀಕರ ಅಪಘಾತ: ಇಬ್ಬರು ಮೃತ್ಯು!
ಧರ್ಮಸ್ಥಳ: ಕಾರು ಮತ್ತು ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆಯು ಕೊಕ್ಕಡದ ಕೌಕ್ರಾಡಿ ಗ್ರಾಮದ ಪಾರ್ಪಿಕಲ್ಲು ಎಂಬ ಪ್ರದೇಶದಲ್ಲಿ ನಡೆದಿದೆ. ಮೃತಪಟ್ಟವರನ್ನು ಧರ್ಮಸ್ಥಳ ಮುಳಿಕ್ಕಾರು ಮನೆಯ ವೀರಪ್ಪ ಮಲೆಕುಡಿಯರವರ ಪುತ್ರ ದಿನೇಶ (32) ಹಾಗೂ ಧರ್ಮಸ್ಥಳ ಸಂದು ಲೈಟಿಂಗ್ಸ್ ಮಾಲಕ ಸಂದೇಶ್ (30) ಎಂದು ಗುರುತಿಸಲಾಗಿದೆ.
ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ಸಿಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಗಾಯಾಳುಗಳನ್ನು ಕೊಕ್ಕಡದ ಯುವಕರು ಕಾರಿನಿಂದ ಹೊರಗೆ ತೆಗೆದು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ಗಾಯಾಳುಗಳು ಹಾದಿಯಲ್ಲಿಯೇ ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತದ ತೀವ್ರತೆಯಿಂದ ಮಾರುತಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಕಾರಿನಲ್ಲಿದ್ದ ಗಾಯಾಳುಗಳನ್ನು ಹರಸಾಹಸ ಪಟ್ಟು ಸ್ಥಳೀಯ ಯುವಕರು ಕಾರಿನಿಂದ ಹೊರ ತೆಗೆದಿದ್ದು ಆಸ್ಪತ್ರೆಗೆ ಸಾಗಿಸುವಲ್ಲಿ ಶ್ರಮಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
