ಕೊಡಗು ಜಿಲ್ಲೆಯ ಕೆಲವೆಡೆ ಕಂಪಿಸಿದ ಭೂಮಿ ; ಆತಂಕದಲ್ಲಿ ಜನ – Vishwanews24

Featured, ರಾಜ್ಯ ನ್ಯೂಸ್

ಕೊಡಗು ಜಿಲ್ಲೆಯ ಕೆಲವೆಡೆ ಕಂಪಿಸಿದ ಭೂಮಿ ; ಆತಂಕದಲ್ಲಿ ಜನ

ಮಡಿಕೇರಿ: ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಭೂಕಂಪದ ಕೇಂದ್ರ ಬಿಂದು ಕೊಡಗಿನಲ್ಲೆ ಇರುವುದು ಗೊತ್ತಾಗಿದೆ‌.

ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದಿಂದ 5.2  ಕಿ.ಮೀ ವಾಯುವ್ಯ ದಿಕ್ಕಿನಲ್ಲಿ ಭೂಮಿಯ 15 ಕಿ.ಮೀ. ಆಳದಲ್ಲಿ ರಿಕ್ಟರ್ ಮಾಪಕ 3.0ರಷ್ಟು ಭೂಕಂಪನವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ‌ ಕೇಂದ್ರ ತಿಳಿಸಿದೆ.

ಈ ಭೂಕಂಪನದಲ್ಲಿ ಯಾರಿಗೂ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಆದರೆ, ಹಲವು ಸೆಕೆಂಡ್ ಗಳಷ್ಟು ಸಮಯ ಕಂಪನದ ಅನುಭವವಾಗಿದೆ.  ಸುಮಾರು 50 ಕಿ.ಮೀ ಪ್ರದೇಶದವರೆಗೂ ಅನುಭವವಾಗುವ ಸಾಧ್ಯತೆ ಇದೆ. ಆದರೆ, ಈ ಕಂಪನದಿಂದ ಭಯಪಡುವ ಅಗತ್ಯವಿಲ್ಲ. ಹೆಚ್ಚೆಂದರೆ ಮನೆಯಲ್ಲಿರುವ‌ ವಸ್ತುಗಳು ಅಲುಗಾಡಬಹುದು. ಜನತೆ ಗಾಬರಿ ಆಗುವ‌ ಅವಶ್ಯಕತೆಯಿಲ್ಲ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ಹೇಳಿದೆ.

ಈ‌ ಭೂಕಂಪದ ಅನುಭವ ತಮಗೇನಾದರೂ ಆದರೆ ಹಾಗೂ ಭೂಮಿಯಲ್ಲಿ ಬಿರುಕುಗಳು ಕಂಡು ಬಂದರೆ ಕೊಡಗು ಜಿಲ್ಲೆಯ ವಿಪತ್ತು ನಿರ್ವಹಣಾ ಕೇಂದ್ರ 08272-221077, 221099  ಕರೆ ಮಾಡಿ ಮಾಹಿತಿ ಕೊಡಬೇಕೆಂದು ಮನವಿ ಮಾಡಿದೆ‌‌.

ಮಡಿಕೇರಿ, ನಾಪೋಕ್ಲು, ಕುಕ್ಕುಂದ, ಕಾಡು, ಬಲ್ಲಮಾವಟ್ಟಿ. ದಬ್ಬಡ್ಕ, ಪೆರಾಜೆ, ಕರಿಕೆ, ಭಾಗಮಂಡಲ ಸೇರಿದಂತೆ ವಿವಿಧ ಕಡೆ  7.45 ಕ್ಕೆ ಭೂಮಿ ಕಂಪಿಸಿದ ಅನುಭವ ಜನರಿಗೆ ಆಗಿದೆ. ಮನೆಯಲ್ಲಿದ್ದ ಪಾತ್ರೆಗಳು ಅಲುಗಾಡಿವೆ.‌

ಜುಲೈ ‌ 1ರಿಂದ ನಗರದಲ್ಲಿ ಜನತಾ ಯಾತ್ರೆ ಪ್ರಾರಂಭ : .ಕುಮಾರಸ್ವಾಮಿ – Vishwanews24

 

Leave a Reply