ಕೊರಗರು, ಗಿರಿ ಜನರು, ದಲಿತ ಬಂಧುಗಳು ಭಯ ಪಡುವ ಅವಶ್ಯಕತೆಯಿಲ್ಲ , ಸರ್ಕಾರ ನಿಮ್ಮ ಜೊತೆಯಿದೆ : ಸಚಿವ ಕೋಟ – Vishwanews24
ಕೊರಗರು, ಗಿರಿ ಜನರು, ದಲಿತ ಬಂಧುಗಳು ಭಯ ಪಡುವ ಅವಶ್ಯಕತೆಯಿಲ್ಲ , ಸರ್ಕಾರ ನಿಮ್ಮ ಜೊತೆಯಿದೆ : ಸಚಿವ ಕೋಟ – Vishwanews24
ಬೆಂಗಳೂರು: ಕೊರಗರು, ಗಿರಿ ಜನರು, ದಲಿತ ಬಂಧುಗಳು ಭಯ ಪಡುವ ಅವಶ್ಯಕತೆಯಿಲ್ಲ. ನಾನು, ಗೃಹ ಸಚಿವರು, ಸರ್ಕಾರ ನಿಮ್ಮ ಜೊತೆಯಿದೆ. ಏನಾದರೂ ಇದ್ದರೆ ಸಿಎಂಗೂ ಮಾಹಿತಿ ನೀಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಡುಪಿ ಜಿಲ್ಲೆಯ ಕೋಟಾದಲ್ಲಿ ಗಿರಿಜನರ ಮೇಲೆ ಪೋಲಿಸರಿಂದ ವಿನಾಕಾರಣ ಹಲ್ಲೆ ಮಾಡಲಾಗಿತ್ತು. ಒಬ್ಬ ಪಿಎಸ್ಐ, ಸಸ್ಪೆಂಡ್ ಆರು ಜನರ ವರ್ಗಾವಣೆ ಕೂಡ ಮಾಡಲಾಗಿದೆ. ನಾನು ಸ್ಥಳಕ್ಕೆ ಭೇಟಿ ನೀಡಿದ್ದೆ. ಎಸ್ಪಿ ಮತ್ತು ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಿದ್ದೆ. ಈ ಮಧ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿತ್ತು. ಒಬ್ಬ ಕಾನ್ಸ್ಟೇಬಲ್ ನನ್ನ ಮೇಲೆ ಹಲ್ಲೆಯಾಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದಿವಾಸಿ ಕೇರಿಯಲ್ಲಿ ಆತಂಕ ಸೃಷ್ಟಿಯಾಗಿತ್ತು. ಪ್ರಕರಣದ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಅಲ್ಲಿರುವ ಪರಿಸ್ತಿತಿಯನ್ನು ಗೃಹಸಚಿವರಿಗೆ ವಿವರಿಸಿದ್ದೆ ಎಂದರು.
ಯಾವುದೇ ಕಾರಣಕ್ಕೂ ಅಲ್ಲಿರುವವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಎಸ್ಪಿ ಅವರಿಗೆ ಕರೆ ಮಾಡಿ ಪ್ರಕರಣದ ವಿಚಾರ ಕಾನೂನು ಪ್ರಕಾರ ದೂರು ದಾಖಲಿಸಲು ಸೂಚಿಸಿದ್ದಾರೆ. ದಲಿತರಿಗೆ ಯಾವುದೇ ತೊಂದರೆಯಾಗದಂತೆ ಗೃಹಸಚಿವರು ಸೂಚಿಸಿದ್ದಾರೆ ಎಂದರು.
ಅಯೋಧ್ಯೆಯಂತೆ ಮಥುರಾ, ವೃಂದಾವನದಲ್ಲೂ ಭವ್ಯ ದೇಗುಲ ನಿರ್ಮಾಣ : ಯೋಗಿ ಆದಿತ್ಯನಾಥ್ – Vishwanews24
